ಬಜಾರಿನಲ್ಲಿ ಬುದ್ಧ….

ಬಜಾರಿನಲ್ಲಿ ಇದ್ದ ಬುದ್ಧ
ರಾಮ, ಕೃಷ್ಣ, ಶಿವ, ಗಾಂಧಿ
ಅಂಬೇಡ್ಕರ್ ಅವರ ಜೊತೆಗೆ ಕುಳಿತಿದ್ದ.

ಮೊಂಡು ಕೈ, ಹರಿದ ಅಂಗವಸ್ತ್ರ….
ಬುದ್ಧ ಹೌದೋ ಅಲ್ಲವೋ ಎಂದು
ಅನುಮಾನಿಸುವಷ್ಟು ಚಿಂದಿಯಾಗಿದ್ದ.

ಆದರವೇ ಜಾಜ್ವಲ್ಯಮಾನ ಕಣ್ಣುಗಳು
ಸೆಳೆದವು, ಹೊಳೆದವು ಫಳ ಫಳ
ಪುಳಕಿತಳಾಗಿ ಮನೆಗೆ ಕರೆದೆ, ಬಂದ.

ಒಣಗಿದ ಹೂವು, ಆರಿದ ದೀಪ, ಪಿನ್ನು,
ಪುಸ್ತಕ, ಎಂಜಲು ತಟ್ಟೆ, ಒಣಗಿದ ಬಟ್ಟೆ,
ಹಣ್ಣು-ತರಕಾರಿಯ ಒತ್ತರಿಸಿ, ಅಂಗೈಯಲ್ಲಿ
ಗುಡಿಸಿ, ಸಾರಿಸಿ ಜಾಗ ಮಾಡಿಕೊಟ್ಟೆ-
ಮೇಜಿನ ಮೂಲೆಯಲಿ ಕೂತ.

ಅವನು ಬುದ್ಧ
ಮೈತ್ರಿ-ಕರುಣೆಯ ಸಾಕಾರ
ಅವನದೇ ಮಾತು: ಸಂಸಾರ ದುಃಖಸಾಗರ
ಆಶೆಯೇ ದುಃಖಕ್ಕೆ ಮೂಲ, ಜೀವನವು ನಶ್ವರ.

ಮಾರನಿಗೊಲಿದಿದ್ದ ನಾವು ಅವನ ಮುಂದೆಯೆ
ಶುರು ಹಚ್ಚಿಕೊಂಡೆವು ವ್ಯವಹಾರ
ಮನೆ ಮಂದಿಯ ಮೋಹ, ಮದ, ಮತ್ಸರ
ಆತಂಕ, ಆವೇಶ, ದುಃಖ, ಕೋಪ
ಎಲ್ಲವೂ ಈಗವನ ಸಮ್ಮುಖ!

ದೂಷಣೆ, ಶೋಷಣೆ, ಘೋಷಣೆ
ಯುದ್ಧ-ಕದನ ವಿರಾಮಗಳಿಗೆ-
ಅವನೇ ಸಾಕ್ಷಿ, ಅವನದೇ ರಾಯಭಾರ.
ರೋಗ ರುಜಿನ, ಮರಣ ಎಲ್ಲವುಗಳಿಗೆ
ಅವನೇ ಕಾರಣ, ಅವನಿಂದಲೇ ಶಮನ!

ಅಷ್ಟಾಂಗ ಮಾರ್ಗಗಳಿಗೆ ನಮಿಸಿದೆವು ನಿಜ,
ಆಚರಿಸಿದೆವೋ ಅನುಮಾನ!
ಏರಿದ ಎತ್ತರ, ಇಳಿದ ಪ್ರಪಾತ,
ಕವಿದ ಕಾರ್ಮೋಡ, ಕರಗಿದ ಕಾವಳ-
ಇಲ್ಲದೆಯೂ ಇದ್ದಂತೆ, ಜೊತೆಗಿದ್ದ….

ಇಪ್ಪತ್ತು ವರುಷವಾಯಿತು ಬುದ್ಧ
ನಮ್ಮಲ್ಲಿಗೆ ಬಂದು-
ನಮ್ಮೊಂದಿಗೇ ನಿಂದು, ನೊಂದು, ಬೆಂದು;
ಈಗವನು ನಮ್ಮವನು, ನಮ್ಮಲ್ಲೇ ಒಂದು.

ಇನಿತೂ ಬದಲಾಗಿಲ್ಲ….ಅದೇ
ಗುಂಡು ಮುಖ, ತುಂಡು ಬಾಯಿ
ಮೊಂಡು ಕೈ, ಹರಿದ ಅಂಗವಸ್ತ್ರ,
ಅದೇ ಮೌನ, ಸಮಾಧಾನ

ನಾವೂ ಅಷ್ಟೆ, ಇನಿತೂ ಬದಲಾಗಿಲ್ಲ!
ಅದೇ ವೇಗ, ಅದೇ ಭೋಗ,
ಅದೇ ತನ್ಹಾ….ಅದೇ ತಲ್ಲಣ!!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾದು ಕುಳಿತ ಪೆಣತಿನಿಗಳು
Next post ಮನೆವಾಳ್ತನ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

cheap jordans|wholesale air max|wholesale jordans|wholesale jewelry|wholesale jerseys