ನನ್ನತನ ನನ್ನನುಡಿ

ಯಾವ ಊರಿಗೆ ಹೋದರೂ
ನನ್ನೂರು ನೆನಪಾಗುವುದು

ಗೌರಿ ಶಂಕರನಿಗೆ ಶಿರ
ಬಾಗಿದರೂ ಮನ
ಸಹ್ಯಾದ್ರಿಗೆ ಮರಳುವುದು

ಯಾವ ಊರಿಗೆ ಹೋದರೂ
ನನ್ನೂರು ನೆನಪಾಗುವುದು

ಗಂಗೆಯಲಿ ಮಿಂದರೂ
ಮೈ-ಮನ
ತುಂಗೆಯಲಿ ತಂಗುವುದು

ಯಾವ ಊರಿಗೆ ಹೋದರೂ
ನನ್ನೂರು ನೆನಪಾಗುವುದು

ನಾನು ನನ್ನದು ನನ್ನವರೆಂಬ
ಬೆಟ್ಟ-ಗುಡ್ಡ ನದಿ-ತೋಪು
ನಿತ್ಯ ಕೈ ಬೀಸಿ ಕರೆಯುವುದು

ಯಾವ ಊರಿಗೆ ಹೋದರೂ
ನನ್ನೂರು ನೆನಪಾಗುವುದು

ನನ್ನತನ ನನ್ನ ನುಡಿ
ನನ್ನೊಡನೆ
ಬಾಳುವುದು ಬೆಳಗುವುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲಾವಿದ
Next post ಅಲ್ಪ

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

cheap jordans|wholesale air max|wholesale jordans|wholesale jewelry|wholesale jerseys