ದರುಶನ

ಕತ್ತಲೆಯ ಕೊಂಬೆ ಸವರಿ
ನಕ್ಷತ್ರ ಎಲೆಗಳನೊಟ್ಟಿ ರಾಶಿಯಾಗಿಸಿ
ಹಾದಿ ಬೀದಿಯ ಸೂರ್ಯನಂತೆ ಬೆಳಗಿದ.

ಕಪ್ಪು ಮುಖ, ಕೆಂಡಗಣ್ಣು
ಹಳದಿ ಹಲ್ಲು, ತಲೆಯೋ ಹೊರೆ ಹುಲ್ಲು
ಶಂಖ ಚಕ್ರ ಗದಾಪದ್ಮ ?…
ಅಲ್ತಲ್ತು ಅಲ್ತಲ್ತು
ಗೋರೆ, ಪೊರಕೆ, ಸನಿಕೆ ಸಂಭೂಷಿತ-

ಒಂದು ಮುಂಜಾನೆ
ಮನೆಯಂಗಳದಲ್ಲಿ ಪ್ರತ್ಯಕ್ಷ.

ಮಡುಗಟ್ಟಿತ್ತು ಶತ ಶತಮಾಗಳ ಕೊಳೆ
ಸುತ್ತ ಕಸ ಕಡ್ಡಿ ಕೆಸರಿನ ಹೊಳೆ
ಹರಿಸು ತಂದೆ, ಹರಿಸು ಮುಂದೆ ಅಂದೆ
ವಿನೀತಳಾಗಿ…

ಕೊಳೆ ಕಳೆದು ಹರಿಸಿದ ನೀರು ಸರಾಗ
ಹೆಜ್ಜೆಯನಿಕ್ಕಿ ಒಪ್ಪಗೊಳಿಸಿದ ಒಳಗ
ಮೂಲೆ ಮೂಲೆಯ ಗುಡಿಸಿ
ನಿರ್ಮಲವಾಗಿಸಿದ.

ಅದೆಲ್ಲೋ ದೂರ ಗುಡಿ ಗೋಪುರ
ಇಲ್ಲಿ ಇಷ್ಟು ಹತ್ತಿರ ಅದರ ಸರದಾರ.

ತಂಗಳನ್ನವ ಉಂಡು, ಕಚ್ಚಿ ಬೀಡಿಯ ತುಂಡು
ಪೊರಕೆ, ಸನಿಕೆ ಹಿಡಿದ ಕೈಗಳನೆತ್ತಿ
‘ಮರಳಿ ಬರುವೆ’ ಎಂದು ಹೊರಟು ಹೋದ…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಮಿಷ
Next post ನಿನ್ನೆದೆಗೆ ನಾನೇನ ತಂದೆ?

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

cheap jordans|wholesale air max|wholesale jordans|wholesale jewelry|wholesale jerseys