ಕೋವಿ ಹಿಡಿಯದ ಕೈಗಳೇ ಕಂಬನಿ ಒರೆಸಬೇಕು…

ಒಬ್ಬ ಮನುಷ್ಯ ಹಸಿವೆಯಂದ
ಎಷ್ಟು ನರಳಬಹುದೋ
ಅಷ್ಟು ದಾರುಣವಾಗಿ ಅವನು ನರಳಿದ್ದ.

ಒಂದು ತುಂಡು ರೊಟ್ಟಿಗಾಗಿ
ಎಷ್ಟು ಹೋರಾಡಬಹುದೋ
ಅಷ್ಟು ತೀವ್ರವಾಗಿ ಅವನು ಹೋರಾಡಿದ್ದ.

ಅವನ ಒಡಲಾಗ್ನಿ ಯಾರನ್ನೂ ಸುಡಲಿಲ್ಲ.

ದುಃಖ ದುಮ್ಮಾನಗಳಿಂದ
ಒಬ್ಬ ಮನುಷ್ಯ ಎಷ್ಟು ನೋಯಬಹುದೋ
ಅಷ್ಟೂ ತೀವ್ರವಾಗಿ ಅವನು ನೊಂದಿದ್ದ

ನೋವು ಅವಮಾನಗಳಿಗೀಡಾಗಿ ಜರ್ಝರಿತನಾಗಿದ್ದ.

ಅವನೆದೆ ಎಂದೂ ಕಲ್ಲಂತೆ ಪೆಡಸಾಗಲಿಲ್ಲ.

ಈ ಹೊತ್ತಿಗೂ ಅವನಿರುವನಿಲ್ಲೇ ನಮ್ಮ ನಡುವೆ
ಒಂದಾಗಿ ಗಿಡ ಮರ ಹಳ್ಳ-ಕೊಳ್ಳದಂತೆ ತೂಗಿ ಬಾಗಿ.

ಹೌದು….
ಕೋವಿ ಹಿಡಿಯದ ಕೈಗಳೇ
ಕಂಬನಿ ಒರೆಸಬೇಕು!
ಸಾವಿನೊಡನೆ ಸೆಣಸಾಡಿದರೂ
ಘನತೆಯಿಂದ….

ಗೆಳೆಯಾ….
ಕೋವಿ, ಗುಂಡು, ರಕ್ತ, ಚೀತ್ಕಾರ
ಈ ಭುವಿಗೆ ತುಂಬ ಹಳತು.

ಬದುಕ ಬೆಳಗಿಸಲು ಹೊಸ ಅಸ್ತ್ರಗಳೇನಾದರೂ
ನಿನ್ನ ಬಳಿ ಇವೆಯಾ, ಹೇಳು….
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಕಾಂತದ ಆಲಾಪ
Next post ಒಳತೋಟಿ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys