ಕೋವಿ ಹಿಡಿಯದ ಕೈಗಳೇ ಕಂಬನಿ ಒರೆಸಬೇಕು…

ಒಬ್ಬ ಮನುಷ್ಯ ಹಸಿವೆಯಂದ
ಎಷ್ಟು ನರಳಬಹುದೋ
ಅಷ್ಟು ದಾರುಣವಾಗಿ ಅವನು ನರಳಿದ್ದ.

ಒಂದು ತುಂಡು ರೊಟ್ಟಿಗಾಗಿ
ಎಷ್ಟು ಹೋರಾಡಬಹುದೋ
ಅಷ್ಟು ತೀವ್ರವಾಗಿ ಅವನು ಹೋರಾಡಿದ್ದ.

ಅವನ ಒಡಲಾಗ್ನಿ ಯಾರನ್ನೂ ಸುಡಲಿಲ್ಲ.

ದುಃಖ ದುಮ್ಮಾನಗಳಿಂದ
ಒಬ್ಬ ಮನುಷ್ಯ ಎಷ್ಟು ನೋಯಬಹುದೋ
ಅಷ್ಟೂ ತೀವ್ರವಾಗಿ ಅವನು ನೊಂದಿದ್ದ

ನೋವು ಅವಮಾನಗಳಿಗೀಡಾಗಿ ಜರ್ಝರಿತನಾಗಿದ್ದ.

ಅವನೆದೆ ಎಂದೂ ಕಲ್ಲಂತೆ ಪೆಡಸಾಗಲಿಲ್ಲ.

ಈ ಹೊತ್ತಿಗೂ ಅವನಿರುವನಿಲ್ಲೇ ನಮ್ಮ ನಡುವೆ
ಒಂದಾಗಿ ಗಿಡ ಮರ ಹಳ್ಳ-ಕೊಳ್ಳದಂತೆ ತೂಗಿ ಬಾಗಿ.

ಹೌದು….
ಕೋವಿ ಹಿಡಿಯದ ಕೈಗಳೇ
ಕಂಬನಿ ಒರೆಸಬೇಕು!
ಸಾವಿನೊಡನೆ ಸೆಣಸಾಡಿದರೂ
ಘನತೆಯಿಂದ….

ಗೆಳೆಯಾ….
ಕೋವಿ, ಗುಂಡು, ರಕ್ತ, ಚೀತ್ಕಾರ
ಈ ಭುವಿಗೆ ತುಂಬ ಹಳತು.

ಬದುಕ ಬೆಳಗಿಸಲು ಹೊಸ ಅಸ್ತ್ರಗಳೇನಾದರೂ
ನಿನ್ನ ಬಳಿ ಇವೆಯಾ, ಹೇಳು….
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಕಾಂತದ ಆಲಾಪ
Next post ಒಳತೋಟಿ

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…