Home / ಕವನ / ಕವಿತೆ / ಕೋವಿ ಹಿಡಿಯದ ಕೈಗಳೇ ಕಂಬನಿ ಒರೆಸಬೇಕು…

ಕೋವಿ ಹಿಡಿಯದ ಕೈಗಳೇ ಕಂಬನಿ ಒರೆಸಬೇಕು…

ಒಬ್ಬ ಮನುಷ್ಯ ಹಸಿವೆಯಂದ
ಎಷ್ಟು ನರಳಬಹುದೋ
ಅಷ್ಟು ದಾರುಣವಾಗಿ ಅವನು ನರಳಿದ್ದ.

ಒಂದು ತುಂಡು ರೊಟ್ಟಿಗಾಗಿ
ಎಷ್ಟು ಹೋರಾಡಬಹುದೋ
ಅಷ್ಟು ತೀವ್ರವಾಗಿ ಅವನು ಹೋರಾಡಿದ್ದ.

ಅವನ ಒಡಲಾಗ್ನಿ ಯಾರನ್ನೂ ಸುಡಲಿಲ್ಲ.

ದುಃಖ ದುಮ್ಮಾನಗಳಿಂದ
ಒಬ್ಬ ಮನುಷ್ಯ ಎಷ್ಟು ನೋಯಬಹುದೋ
ಅಷ್ಟೂ ತೀವ್ರವಾಗಿ ಅವನು ನೊಂದಿದ್ದ

ನೋವು ಅವಮಾನಗಳಿಗೀಡಾಗಿ ಜರ್ಝರಿತನಾಗಿದ್ದ.

ಅವನೆದೆ ಎಂದೂ ಕಲ್ಲಂತೆ ಪೆಡಸಾಗಲಿಲ್ಲ.

ಈ ಹೊತ್ತಿಗೂ ಅವನಿರುವನಿಲ್ಲೇ ನಮ್ಮ ನಡುವೆ
ಒಂದಾಗಿ ಗಿಡ ಮರ ಹಳ್ಳ-ಕೊಳ್ಳದಂತೆ ತೂಗಿ ಬಾಗಿ.

ಹೌದು….
ಕೋವಿ ಹಿಡಿಯದ ಕೈಗಳೇ
ಕಂಬನಿ ಒರೆಸಬೇಕು!
ಸಾವಿನೊಡನೆ ಸೆಣಸಾಡಿದರೂ
ಘನತೆಯಿಂದ….

ಗೆಳೆಯಾ….
ಕೋವಿ, ಗುಂಡು, ರಕ್ತ, ಚೀತ್ಕಾರ
ಈ ಭುವಿಗೆ ತುಂಬ ಹಳತು.

ಬದುಕ ಬೆಳಗಿಸಲು ಹೊಸ ಅಸ್ತ್ರಗಳೇನಾದರೂ
ನಿನ್ನ ಬಳಿ ಇವೆಯಾ, ಹೇಳು….
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...