ಲೋಕದಲಿ ಪುಟ್ಟಿದ ಬಳಿಕ…..

ಸೀರೆ ಸುತ್ತಿಕೊಳ್ಳುವಾಗ ದ್ರೌಪದಿ
ಉಂಗುರ ಎತ್ತಿಕೊಳ್ಳುವಾಗ ಶಕುಂತಲೆ
ಒಲೆ ಹೊತ್ತಿಕೊಳ್ಳುವಾಗ ಸೀತೆ
ಯಾಕೆ, ಯಾಕೆ ನೆನಪಾಗಬೇಕು?

ಕೆರೆಯ ಏರಿಯ ಮೇಲೆ ಭಾಗೀರಥಿ
ಎಡವಿದ ಕಲ್ಲುಗಳಲ್ಲಿ ಒಬ್ಬಬ್ಬಳೂ ಮಹಾಸತಿ
ಯಾಕೆ, ಯಾಕೆ ಕಾಣಬೇಕು?

ಚಿತೆಯಿಂದ ಎದ್ದು ಹಾರುವ ಬೂದಿ
ಲತೆಯಿಂದ ಕಳಚುವ ಮೊಗ್ಗಿನ ಬೇಗುದಿ
ನನ್ನದೇ ನನ್ನದೇ ಎಂದು ಯಾಕೆ ಅನ್ನಿಸಬೇಕು?

`ನಡುವೆ ಸುಳಿವಾತ್ಮ
ಗಂಡೂ ಅಲ್ಲ, ಹೆಣ್ಣೂ ಅಲ್ಲ’
ಯಾವುದಕೂ ಪ್ರಮಾಣಿಸಿ ನೋಡಬೇಕು.

ಮೊಲೆ, ಮುಡಿ, ಉಡಿ
ಹೊತ್ತು ತಿರುಗಿದ ಮೇಲೆ ಅನಿಸಿದ್ದು…
ಕಷ್ಟ ಕಳೆಯಬೇಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾರು?
Next post ಏನಂತಿ

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

cheap jordans|wholesale air max|wholesale jordans|wholesale jewelry|wholesale jerseys