Home / ಕವನ / ಕವಿತೆ / ಏನಾಗುವೆ?

ಏನಾಗುವೆ?

ಇಷ್ಟ ದೇವತೆಯೆಂದು
ಅಷ್ಟ ಸ್ತೋತ್ರವ ಹಾಡಿ
ಧನ-ಕನಕ ಅರ್ಪಿಸಿ
ಪೂಜಿಸಿದವರೆ…

ಎಲ್ಲಿ ನಾರಿಯರು
ಪೂಜಿಸಲ್ಪಡುತ್ತಾರೋ
ಅಲ್ಲಿ ದೇವತೆಗಳ ಹಾಜರಿ
ಪ್ರಮಾಣಿಸಿದವರೇ…

‘ತಾಯಿಗಿಂತ ದೇವರಿಲ್ಲ…
ಜನನಿ ತಾನೆ ಮೊದಲ ಗುರುವು’
ಕಂಠಪಾಠ ಒಪ್ಪಿಸಿ
ಉದ್ದಂಡ ನಮಸ್ಕರಿಸಿ
ಧನ್ಯರಾದವರೇ…

ಶಿಲೆ, ಕಲೆ, ಕಾವ್ಯಗಳಲ್ಲಿ
ಬಣ್ಣಿಸಿ, ಮಾತುಗಳ
ಮಹಾಪೂರ ಹರಿಸಿ
ಸಂಭ್ರಮಿಸಿದವರೇ…

ಕಟ್ಟು-ಕಟ್ಟಳೆ ವಿಧಿಸಿ
ನಿಷೇಧಗಳ ಹೊರೆ ಹರಿಸಿ
ಕಣ್ಗಾವಲಿರಿಸಿ ಕಾಪಾಡಿದ
ಧರ್ಮ ಸಂರಕ್ಷಕರೇ…

ಕಲ್ಲು, ಮಣ್ಣು, ನೀರು
ಗಿಡ, ಮರ, ಹೂವು, ಹಣ್ಣು
ಪಶು-ಪಕ್ಷಿ, ಕ್ರಿಮಿ-ಕೀಟಗಳಲ್ಲಿ
ನನ ಕಂಡು ಕರಗಿದ
ಪವಿತ್ರಾತ್ಮರೇ…

ಕಟ್ಟ ಕಡೆಯ ಮನುಷ್ಯನನು
ಮುಟ್ಟಬಾರದು
ಹೆಣ್ಣು ಹುಟ್ಟಬಾರದು
ಇದಲ್ಲವೆ ಅಲಿಖಿತ ಅನುಶಾಸನ?
ರಕ್ತಗತವಾಗಿ ಹರಿದು
ಉಳಿದಿರುವ ಮರಣಶಾಸನ!

ಮುಟ್ಟುವ ಹಕ್ಕಿಗೆ
ಹುಟ್ಟುವ ಹಕ್ಕಿಗೆ
ಅಂತಃಸಾಕ್ಷಿಯೇ ಮೈಯಾಗಿ
ಅಂತಃಕರಣವೇ ಕೈಯಾಗಿ
ರುಜು ಮಾಡಬೇಕಿದೆ.

ನಾನಳಿದು ಹೇಗೋ ಉಳಿದು
ನಮ್ರವಾಗಿ ಕೆಳಗಿಳಿದು
ಬೆಟ್ಟದಡಿ ಹುಲ್ಲಾಗಿ
ಗಿಡದಡಿ ಕಲ್ಲಾಗಿ ಬಾಳುವೆ.

ಹೇಳು ಏನಾಗುವೆ
ಹೇಳು…ನೀ ಏನಾಗುವೆ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...