Home / ಕವನ / ಕವಿತೆ / ಸಂಸಾರದಿಂದ ಸದ್ಗತಿಹೊಂದಿ

ಸಂಸಾರದಿಂದ ಸದ್ಗತಿಹೊಂದಿ

ಸಂಸಾರದಿಂದ ಸದ್ಗತಿಹೊಂದಿ
ಹವಣವರಿತು ಮಾಯೆಯ ಜಯಸಿ
ಮರಣ ಗೆಲಿದವನೇ ಶಿವಯೋಗಿ ||ಪ||

ಭವಭಾರ ಜಾಯ ಕರ್ಮಗಳನು
ಬಯಸಿ ಬ್ಯಾರೆ ಬಯಲು ಬ್ರಹ್ಮದಿ ಬೆರೆತು
ಬ್ರಹ್ಮಜ್ಞಾನ ದೊರೆವುತನಕ
ತ್ರಿನಯನ ಆಶ್ರಯ ಹಿಡಿದು
ಆವುದನರಿಯದೆ ಮುನ್ನಾ
ಅನುವರಿತು ಸವಿಗರಿದು
ಸಕಲ ವಿಷಯಗಳನ್ನು ನಿರಾಕರಿಸಿ
ಜಪವ ಕೈಯೊಳು ಸಿಗದೆ ನಡೆದವ್ನೇ ಶಿವಯೋಗಿ ||೧||

ನಿತ್ಯ ಮಾಡುವ ಕೆಟ್ಟ
ಕೃತ್ಯ ಕಾರಣಕ್ಕೆ ಸಾಕ್ಷಿ
ಹತ್ತು ಇಂದ್ರಿಯ ಮನಸ್ಸು ಹರಿದು
ಚಿತ್ತಮದ ಮತ್ಸರಕೆ
ಮತ್ತೆ ಅಸ್ಥಿರದ ಘಟದ ಚೇಷ್ಟೆಯನು
ಹೊತ್ತುಕೊಂಡು ಚಿತ್ರಗುಪ್ತರ ಲೆಖ್ಖದೊಳು ಬೆರೆಸಿಹುದಾಗಿ ||೨||

ಹಿಂದೆ ಮಾಡಿದ ಪುಣ್ಯದಿಂದ
ಪೊಡವಿಸ್ಥಲಕೆ ಬಂದು
ಶಿಶುನಾಳಗ್ರಾಮದಿ ನಿಂದು
ದಿನಗಳಿದು ದಂದುಗಕ್ಕೆ ದಣಿದು
ಸುಂದರ ಶರೀರದೊಳು ಸೇರಿ
ಚಂದದಲಿ ಮೆರೆದನು ಆನಂದಭೋಗಿ ||೩||

****

 

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...