ಸಂಸಾರದಿಂದ ಸದ್ಗತಿಹೊಂದಿ

ಸಂಸಾರದಿಂದ ಸದ್ಗತಿಹೊಂದಿ
ಹವಣವರಿತು ಮಾಯೆಯ ಜಯಸಿ
ಮರಣ ಗೆಲಿದವನೇ ಶಿವಯೋಗಿ ||ಪ||

ಭವಭಾರ ಜಾಯ ಕರ್ಮಗಳನು
ಬಯಸಿ ಬ್ಯಾರೆ ಬಯಲು ಬ್ರಹ್ಮದಿ ಬೆರೆತು
ಬ್ರಹ್ಮಜ್ಞಾನ ದೊರೆವುತನಕ
ತ್ರಿನಯನ ಆಶ್ರಯ ಹಿಡಿದು
ಆವುದನರಿಯದೆ ಮುನ್ನಾ
ಅನುವರಿತು ಸವಿಗರಿದು
ಸಕಲ ವಿಷಯಗಳನ್ನು ನಿರಾಕರಿಸಿ
ಜಪವ ಕೈಯೊಳು ಸಿಗದೆ ನಡೆದವ್ನೇ ಶಿವಯೋಗಿ ||೧||

ನಿತ್ಯ ಮಾಡುವ ಕೆಟ್ಟ
ಕೃತ್ಯ ಕಾರಣಕ್ಕೆ ಸಾಕ್ಷಿ
ಹತ್ತು ಇಂದ್ರಿಯ ಮನಸ್ಸು ಹರಿದು
ಚಿತ್ತಮದ ಮತ್ಸರಕೆ
ಮತ್ತೆ ಅಸ್ಥಿರದ ಘಟದ ಚೇಷ್ಟೆಯನು
ಹೊತ್ತುಕೊಂಡು ಚಿತ್ರಗುಪ್ತರ ಲೆಖ್ಖದೊಳು ಬೆರೆಸಿಹುದಾಗಿ ||೨||

ಹಿಂದೆ ಮಾಡಿದ ಪುಣ್ಯದಿಂದ
ಪೊಡವಿಸ್ಥಲಕೆ ಬಂದು
ಶಿಶುನಾಳಗ್ರಾಮದಿ ನಿಂದು
ದಿನಗಳಿದು ದಂದುಗಕ್ಕೆ ದಣಿದು
ಸುಂದರ ಶರೀರದೊಳು ಸೇರಿ
ಚಂದದಲಿ ಮೆರೆದನು ಆನಂದಭೋಗಿ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪರಮಾನುಬೋಧೆಯೊ
Next post ಯೋಗಮುದ್ರಿ ಬಲಿದವನೆಂಬೋ

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

cheap jordans|wholesale air max|wholesale jordans|wholesale jewelry|wholesale jerseys