ರಾಜಕಾರಣ

ಏನೆ? ಏನೆ? ಏನದು?
ಬಾತಿದೆ? ಕೊಳೆತಿದೆ?

ಮೇಗಡೆ ಹಾರುತ್ತಿದೆ ಡೇಗೆ
ನರಿಯೊಂದು ಊಳಿಡುತ್ತಿದೆ
ನಾಯೊಂದು ಹೊಂಚು ಹಾಕಿದೆ
ಕಾಗೆಗಳು ತಾರಾಡುತ್ತಿವೆ
ಇರುವೆಗಳು ದಂಡೆತ್ತಿವೆ
ನೊಣಗಳು ಗುಂಯ್‌ ಗುಡುತ್ತಿವೆ
ಮಿಜಿ ಮಿಜಿ ಮಿಜಿ ಮಿಜಿ
ಮೂಗು ಮುಚ್ಚಿಕೊಂಡರೂ
ಮಂದಿಯ ನೋಟ ಅತ್ತಲೇ….

ಹೌದೇನೇ? ಹೌದೇನೇ? ನಿಜವೇನೇ?
ದೇಹವೋ? ದೇಶವೋ?
ಕಾಯವೋ? ಕನಸೋ?

ಅದೇ…. ಅದೇ….
ಆತ್ಮದ ತುಣುಕು ಕಣೇ….
ಹೇಳಲಾರೆ…. ತಾಳಲಾರೆ….

ಹೂಂ….
ಇರಲಿ ಹಚ್ಚೋಣ ಬಾ
ತುಣುಕಿನೊಂದರ ಮೇಲೆ
ಮಿಣುಕು ದೀಪ…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಜ್ಜಿ-ಮೊಮ್ಮಗ
Next post ಸಾಹಿತ್ಯ ಮತ್ತು ಧರ್ಮ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…