ಮಾತುಮಾತಿಗೆ

ಮಾತುಮಾತಿಗೆ ಸಿಟ್ಟುಮಾಡಿದಿರಿ
ಪಾತ್ರೆ ಪಗಡೆಗಳ ಒಡೆದುಹಾಕಿದಿರಿ
ಕಂಡಕಂಡವರಿಗೆ ಕೆಂಡವಾದಿರಿ
ಸಿಟ್ಟು ನಾಶಕೆ ಮೂಲವೆಂದ ನಮ್ಮ
ಬುದ್ಧನ ಕೇಳಿದಿರ

ಅದು ಬೇಕು ಇದು ಬೇಕು ಎಲ್ಲ ಬೇಕೆಂದಿರಿ
ಎಷ್ಟು ದೊರಕಿದರು ಇನ್ನಷ್ಟು ಬೇಕೆಂದಿರಿ
ಸಾಕೆಂಬ ಪದವನ್ನೆ ಮರೆತುಬಿಟ್ಟಿರಿ
ಆಸೆಯೇ ದುಃಖಕ್ಕೆ ಮೂಲವೆಂದ ನಮ್ಮ
ಬುದ್ಧನ ಕೇಳಿದಿರ

ಅನ್ಯರೆಂದು ಹಿಂಸೆ ನೀಡಿದಿರಿ
ಆಟವೆಂದು ಬೇಟೆಯಾಡಿದಿರಿ
ಹಾರುವ ಪಾರಿವಕೆ ಗುರಿಯಿಟ್ಟು ಹೊಡೆದಿರಿ
ಹಿಂಸೆಯೇ ಬಹು ದೊಡ್ಡ ಪಾಪವೆಂದ ನಮ್ಮ
ಬುದ್ಧನ ಕೇಳಿದಿರ

ಕರುಣೆ ತೋರಿದರೆ ತಮಗೇನು ಎಂದಿರಿ
ದಾನಧರ್ಮಗಳೆಲ್ಲ ಸುಳ್ಳು ಎಂದಿರಿ
ಪಡೆಯದಲ್ಲದೆ ಕೊಡಲಾರೆವೆಂದಿರಿ
ಕಾರಣ ವಿನಾ ಪ್ರೀತಿ ನಿಜವಾದ ಪ್ರೀತಿಯೆಂದ ನಮ್ಮ
ಬುದ್ಧನ ಕೇಳಿದಿರ

ಗಹಗಹ ನಗೆಗಿಂತ ಮುಗುಳುನಗೆ ಮಿಗಿಲೆಂದ
ಬಡಬಡ ನುಡಿಗಿಂತ ಮೌನವ ಲೇಸೆಂದ
ಆಧ್ಯಾತ್ಮಕಿಂತ ಮಹಾಮೌನವೇ ಒಳಿತೆಂದ
ನಮ್ಮ ಬುದ್ಧನ ಕೇಳಿದಿರ
ನೀವು ನಮ್ಮ ಬುದ್ಧನ ಕೇಳಿದಿರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಹಿಸಿಹಿ ಕತೆ
Next post ಸೂರುಕೊಡಿ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…