ಮುಖವ ಕನ್ನಡಿಯಲ್ಲಿ

ಮುಖವ ಕನ್ನಡಿಯಲ್ಲಿ ನೋಡುವಿರಿ
ನೋಡಿ ಬಗೆಬಗೆಯಲ್ಲಿ ತೀಡುವಿರಿ
ಮನವ ಯಾವುದರಲ್ಲಿ ನೋಡುವಿರಿ
ಮನದ ಡೊಂಕನು ಎಂತು ತಿದ್ದುವಿರಿ
ಅಂತರಾತ್ಮದ ಬೆಳಕಿಲ್ಲದೆ

ನದಿಯಲಿಳಿದು ಮೈಯ ತೊಳೆಯುವಿರಿ
ಕೆಸರು ಕೊಳೆಯನ್ನು ಅಲ್ಲಿ ಕಳೆಯುವಿರಿ
ಮನವ ಯಾವುದರಲ್ಲಿ ತೊಳೆಯುವಿರಿ
ಮನದ ಕೊಳೆಯನು ಎಂತು ಬಿಡುವಿರಿ
ಅಂತರಂಗದ ಗಂಗೆಯಿಲ್ಲದೆ

ಅವರ ಮಾತಿಗೆ ಅಲ್ಲಿ ಮರುಗುವಿರಿ
ಇವರ ಮಾತಿಗೆ ಇಲ್ಲಿ ಕೊರಗುವಿರಿ
ಮನದ ಮಾತಿಗೆ ಎಲ್ಲಿ ಮರುಗುವಿರಿ
ಮನದ ಮಾತಿಗೆ ಹೇಗೆ ಕರಗುವಿರಿ
ಅಂತಃಸಾಕ್ಷಿಯಿಲ್ಲದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಜೆಗತ್ತಲು
Next post ಬಸವಿ ಮಗಳು

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…