ಕಾಳು ನೀಡು ಹಕ್ಕಿಗಳಿಗೆ

ಕಾಳು ನೀಡು ಹಕ್ಕಿಗಳಿಗೆ
ಕಾಳಿಗವೇ ಕಾರಣ
ನೀರು ನೀಡು ಮರಗಳಿಗೆ
ನೀರಿಗವೇ ಕಾರಣ

ನಿನ್ನೆಯ ನೆನೆ-ಈ ದಿನಕೆ
ನಿನ್ನೆಯೇ ಕಾರಣ
ಈ ದಿನ ಜೋಪಾನ-
ನಾಳೆಗೀ ದಿನವೇ ಕಾರಣ

ಯಾರು ನೇಯ್ದ ಮಹಾಜಾಲ
ವಿಶ್ವವೆಂಬೀ ಅಚ್ಚರಿ
ಅಲ್ಲಿ ಬಿಸಿಲು ಇಲ್ಲಿ ಮಳೆ
ಇಂದ್ರಚಾಪದೀಪರಿ

ನೀನು ನಾನು ಅವನು ಅವಳು
ಅದುವು ಇದುವು ಎಲ್ಲವೂ
ಒಂದೆ ದೋಣಿಯಲ್ಲಿ ಯಾನ
ಮುಳುಗಿದರೆ ಸಮಸ್ತವೂ

ಜ್ಞಾನಿಯೇ ವಿಜ್ಞಾನಿಯೇ
ಮುಗ್ಧನೇ ಪ್ರಬುದ್ಧನೇ
ಶುದ್ಧನೇ ಮಹಾ ಬುದ್ಧನೇ
ಅನಿಸು ನಾನು ನಿಮ್ಮವನೆ
*****

One thought on “0

  1. ತುಂಬಾ ಚೆನ್ನಾಗಿ ಮೂಡಿ ಬಂದಿದೆ ಕವಿತರ

Leave a Reply to ಡಾ.ಆನಂದಾಚಾರ್ Cancel reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಹ್ಯಾಕಾಶದ ಕಥೆ
Next post ನನ್ನವರು

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

cheap jordans|wholesale air max|wholesale jordans|wholesale jewelry|wholesale jerseys