Home / ಕವನ / ಕವಿತೆ / ಮಾನ್ಯರಿಗೆ ಶರಣು

ಮಾನ್ಯರಿಗೆ ಶರಣು

ಮಾನ್ಯರಿಗೆ ಶರಣು ಜನ
ಸಾಮಾನ್ಯರಿಗೆ ಶರಣು
ಅನ್ಯರಿಗೆ ಶರಣು ಅನನ್ಯರಿಗೆ ಶರಣು
ಗಣ್ಯರಿಗೆ ಶರಣು ನಗಣ್ಯರಿಗೆ ಬಹಳ ಶರಣು

ಹೊನ್ನೆ ಮರದಡಿ ಕೂತವರಿಗೆ
ಚೆನ್ನೆಯಾಡುವ ಕನ್ನೆಯರಿಗೆ
ಕನ್ನಡದ ಜಾಣೆಯರಿಗೆ
ಕನ್ನಡದ ಜಾಣರಿಗೆ ಬಹಳ ಶರಣು

ಮೊನ್ನೆ ಹೋದವರಿಗೆ
ನಿನ್ನೆ ಬಂದವರಿಗೆ
ಮುನ್ನ ಇದ್ದವರಿಗೆ
ಇನ್ನು ಬರುವವರಿಗೆ ಬಹಳ ಶರಣು

ಅಂಕೆಗಳಲಿ ಸೊನ್ನೆಗೆ
ಸಂಕದಲಿ ದಾರಿ ಬಿಡುವವರಿಗೆ
ತೆಂಕಣ ಗಾಳಿಗೆ
ಮಂಕು ಪರಿಹರಿಸುವ ವಿದ್ಯೆಗೆ ಬಹಳ ಶರಣು

ನಿಂತ ಗಿರಿಗಳಿಗೆ
ಹರಿವ ತೊರೆಗಳಿಗೆ
ತುಂಬಿದ ಕೆರೆಗಳಿಗೆ
ಬೀಳುವ ಮಳೆಹನಿಗಳಿಗೆ ಬಹಳ ಶರಣು

ಕತೆಗೆ ಕತೆ ಹೇಳುವರಿಗೆ
ಕವಿತೆಗೆ ಕವಿತೆ ಕಟ್ಟುವರಿಗೆ
ಸುಖದಂತೆ ವ್ಯಥೆಯ ಹಂಚಿಕೊಳ್ಳುವವರಿಗೆ
ಪೃಥ್ವಿಯೇ ಸ್ವರ್‍ಗವೆಂದು ತಿಳಿದವರಿಗೆ ಬಹಳ ಶರಣು

ಕೋಲಾಟದವರಿಗೆ ಬಯಲಾಟದವರಿಗೆ
ಡೊಳ್ಳುಕುಣಿತದವರಿಗೆ
ಹಲಗೆ ಬಡಿವವರಿಗೆ
ಉಳುವ ರೈತರಿಗೆ ಬಹಳ ಶರಣು

ವೈದ್ಯರಿಗೆ ವಕೀಲರಿಗೆ
ಮದ್ಯ ಕುಡಿಯದವರಿಗೆ
ಗದ್ಯ ಬರೆವವರಿಗೆ ಪದ್ಯ ಓದುವರಿಗೆ
ಸದ್ಯ ದುಡಿವವರಿಗೆ ಬಹಳ ಶರಣು

ದೇಶವನಾಳುವ ಪ್ರಜೆಗಳಿಗೆ
ವೇಷ ಹಾಕುವ ನಟರಿಗೆ
ಕಾಶಾಯವಸ್ತ್ರಧಾರಿಗಳಿಗೆ
ಬೇಸಾಯಗಾರರೆಲ್ಲರಿಗೆ ಬಹಳ ಶರಣು

ದೀನರಿಗೆ ದಲಿತರಿಗೆ
ದಾನ ನೀಡುವ ಉದಾರಿಗಳಿಗೆ
ಜ್ಞಾನಿಗಳಿಗೆ ವಿಜ್ಞಾನಿಗಳಿಗೆ
ಧ್ಯಾನಿಗಳಿಗೆ ಮಹಾಮೌನಿಗಳಿಗೆ ಬಹಳ ಶರಣು

ನಕ್ಷತ್ರಗಳಿಗೆ ಶರಣು
ಸಕಲ ಸಾಕ್ಷಿಗಳಿಗೆ ಶರಣು
ಅಕ್ಷಯ ಕನಸುಗಳಿಗೆ ಶರಣು
ಕನಸ ರಕ್ಷಿಸುವ ಕವಿಗಳಿಗೆ ಬಹಳ ಶರಣು
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...