Home / ಲೇಖನ / ಇತರೆ / ಪ್ರಗತಿ ಅಥವಾ ದಾಸ್ಯವಿಮೋಚನೆ – ೧೧ನೆಯ ಖಂಡ – ಆಸ್ಥೆ-ಕಾಳಜಿ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೧ನೆಯ ಖಂಡ – ಆಸ್ಥೆ-ಕಾಳಜಿ

“ಹೆಚ್ಚು ಕೆಲಸಮಾಡುವವನಿಗಿಂತ ಕಾಳಜಿಪೂರ್‍ವಕ ಕೆಲಸ ಮಾಡುವವನು ನನಗೆ ಅತ್ಯಂತ ಪ್ರಿಯೆನಾಗುವನು” ಎಂದು ಓರ್ವ ಬ್ರಿಟಿಶ ಮಂತ್ರಿವರ್‍ಯನು ಅಂದಿದ್ದಾನೆ. ಆಚಾರ್ಯರು ಕುದುರೆಯ ಹಿಂದೆಬಿದ್ದದ್ದನ್ನೆಲ್ಲ ತಕ್ಕೊಂಡುಬಾ ಎಂದು ಹೇಳಿದ ಮಾತ್ರದಿಂದ ಬುದ್ಧಿಗೇಡಿ ಭಗವಂತನು ಕುದುರೆಯ ಲದ್ದಿಯನ್ನು ಕೂಡ ಹಸಿಬೆಯಲ್ಲಿ ತುಂಬಿತಂದಂತೆ, ಕಾರ್‍ಯಗಳ ಮಹತ್ವವನ್ನು ತಿಳಿಯದೆ ಕೆಲಸ ಮಾಡುವವರು ಬಹಳ. ಕಾರ್‍ಯದ ಮಹತ್ವ ತಿಳಿಯುವದಕ್ಕೆ ಮನಸ್ಸಿನಲ್ಲಿ ಆಸ್ಥೆ-ಕಾಳಜಿ ವಹಿಸಬೇಕಾಗುವದು. ಆಸ್ಥೆಯು ಬೆಳೆ ಬೆಳೆದಂತೆ ಪ್ರಯತ್ನಗಳು ಎಂದೂ ನಿರರ್‍ಥಕವಾಗುವದಿಲ್ಲ.

ಹಿಂದಕ್ಕೆ ಆಗಿ ಹೋದ ಮಂತ್ರಿವರ್‍ಯ ಯೋಗಂಧರಾಯಣ, ಅಮಾತ್ಯರಾಕ್ಷಸ ಮೊದಲಾದವರು ಅತ್ಯಂತ ಆಸ್ಥೆಯಿಂದ ಕೆಲಸಮಾಡುತ್ತಿದ್ದದರಿಂದಲೇ ಅವರು ಸುಪ್ರಸಿದ್ಧ ಪ್ರಧಾನರಾಗಿದ್ದರು. ಮೈಸೂರ ಮಾಜಿ ದಿವಾಣರಾದ ಸರ ಶೇಷಾದ್ರಿ ಅಯ್ಯನವರು ಒಳ್ಳೇ ಆಸ್ಥೆಯಿಂದ ಕಾರ್ಯಭಾರವನ್ನು ಸಾಗಿಸಿದ್ದರಿಂದಲೇ ಅಂಥ ಕಠಿಣ ಪ್ರಸಂಗದಲ್ಲಿ ಕೂಡಾ ಮೈಸೂರ ರಾಜ್ಯವು ಪ್ರಗತಿಯನ್ನು ಹೊಂದಿತು. ನಮ್ಮ ವಿಷಯಕ್ಕೇ ನಮ್ಮಲ್ಲಿ ಆಸ್ಥೆಯಿಲ್ಲದಿರಲು ಮಂದಿಯ ಬಗ್ಗೆ ನಾವು ಆಸ್ಥೆ ಪಡುವ ಬಗೆಯಾದರೂ ಹೇಗೆ?

“ತನ್ನಂತೆ ಪರರಬಗೆದೊಡೆ ಕೈಲಾಸಬಿನ್ನಣವಳ್ಳ್ಳು” ಎಂಬ ಸರ್ವಜ್ಞ ಕವಿಯ ಉಕ್ತಿಯು ಮನನೀಯವಾಗಿದೆ. ಖರೇ ಆಸ್ಥೆಯಿಂದಾಗಲಿ, ತೋರಿಕೆಯ ಡಂಭಾಚಾರದ ಆಸ್ಥೆಯಿಂದಾಗಲಿ ನಾವು ನಮ್ಮ ಕೆಲಸಗಳನು ಹೇಗಾದರೂ ಸಾಗಿಸಿಕೊಳ್ಳುತ್ತಿರುವೆವು. ಆದರೆ ಪರರ ಕೆಲಸದಲ್ಲಿ ನಮ್ಮ ಆ ಡಂಭಾಚಾರದ ಆಸ್ಥೆಯನ್ನು ಕೂಡ ಉಪಯೋಗಿಸ ಹೋಗದೆ, “ಹತ್ತಿದಲ್ಲಿ ಹತ್ತಿತು ಹಾರಿದಲ್ಲಿ ಹಾರಿತು” ಎನ್ನುವಂತೆ ದುರ್ಲಕ್ಷ್ಯಮಾಡುವೆವು. ಇದರಿಂದ ಕಾರ್ಯಕೆಟ್ಟು ಹಾನಿಯೊಗುವ ಮಾನಕ್ಕಿಂತ, ನಮ್ಮ ವೃತ್ತಿಯು ಕೆಟ್ಟು ಪ್ರಗತಿಹೀನವಾಗುವ ಮಾನವು ಹೆಚ್ಚಾಗುವದು. ಆದ್ದರಿಂದ ಪ್ರಗತಿಪರನು ಪ್ರಗತಿಹೊಂದುವದಕ್ಕಾಗಿ ಮಾಡಬೇಕಾದ ಕೆಲಸವನ್ನು ಒಳ್ಳೇ ಆಸ್ಥೆಯಿಂದ ಮಾಡಿ ಪ್ರಗತಿಹೊಂದಬೇಕು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...