Home / ಲೇಖನ / ಇತರೆ / ಪ್ರಗತಿ ಅಥವಾ ದಾಸ್ಯವಿಮೋಚನೆ – ೧೧ನೆಯ ಖಂಡ – ಆಸ್ಥೆ-ಕಾಳಜಿ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೧ನೆಯ ಖಂಡ – ಆಸ್ಥೆ-ಕಾಳಜಿ

“ಹೆಚ್ಚು ಕೆಲಸಮಾಡುವವನಿಗಿಂತ ಕಾಳಜಿಪೂರ್‍ವಕ ಕೆಲಸ ಮಾಡುವವನು ನನಗೆ ಅತ್ಯಂತ ಪ್ರಿಯೆನಾಗುವನು” ಎಂದು ಓರ್ವ ಬ್ರಿಟಿಶ ಮಂತ್ರಿವರ್‍ಯನು ಅಂದಿದ್ದಾನೆ. ಆಚಾರ್ಯರು ಕುದುರೆಯ ಹಿಂದೆಬಿದ್ದದ್ದನ್ನೆಲ್ಲ ತಕ್ಕೊಂಡುಬಾ ಎಂದು ಹೇಳಿದ ಮಾತ್ರದಿಂದ ಬುದ್ಧಿಗೇಡಿ ಭಗವಂತನು ಕುದುರೆಯ ಲದ್ದಿಯನ್ನು ಕೂಡ ಹಸಿಬೆಯಲ್ಲಿ ತುಂಬಿತಂದಂತೆ, ಕಾರ್‍ಯಗಳ ಮಹತ್ವವನ್ನು ತಿಳಿಯದೆ ಕೆಲಸ ಮಾಡುವವರು ಬಹಳ. ಕಾರ್‍ಯದ ಮಹತ್ವ ತಿಳಿಯುವದಕ್ಕೆ ಮನಸ್ಸಿನಲ್ಲಿ ಆಸ್ಥೆ-ಕಾಳಜಿ ವಹಿಸಬೇಕಾಗುವದು. ಆಸ್ಥೆಯು ಬೆಳೆ ಬೆಳೆದಂತೆ ಪ್ರಯತ್ನಗಳು ಎಂದೂ ನಿರರ್‍ಥಕವಾಗುವದಿಲ್ಲ.

ಹಿಂದಕ್ಕೆ ಆಗಿ ಹೋದ ಮಂತ್ರಿವರ್‍ಯ ಯೋಗಂಧರಾಯಣ, ಅಮಾತ್ಯರಾಕ್ಷಸ ಮೊದಲಾದವರು ಅತ್ಯಂತ ಆಸ್ಥೆಯಿಂದ ಕೆಲಸಮಾಡುತ್ತಿದ್ದದರಿಂದಲೇ ಅವರು ಸುಪ್ರಸಿದ್ಧ ಪ್ರಧಾನರಾಗಿದ್ದರು. ಮೈಸೂರ ಮಾಜಿ ದಿವಾಣರಾದ ಸರ ಶೇಷಾದ್ರಿ ಅಯ್ಯನವರು ಒಳ್ಳೇ ಆಸ್ಥೆಯಿಂದ ಕಾರ್ಯಭಾರವನ್ನು ಸಾಗಿಸಿದ್ದರಿಂದಲೇ ಅಂಥ ಕಠಿಣ ಪ್ರಸಂಗದಲ್ಲಿ ಕೂಡಾ ಮೈಸೂರ ರಾಜ್ಯವು ಪ್ರಗತಿಯನ್ನು ಹೊಂದಿತು. ನಮ್ಮ ವಿಷಯಕ್ಕೇ ನಮ್ಮಲ್ಲಿ ಆಸ್ಥೆಯಿಲ್ಲದಿರಲು ಮಂದಿಯ ಬಗ್ಗೆ ನಾವು ಆಸ್ಥೆ ಪಡುವ ಬಗೆಯಾದರೂ ಹೇಗೆ?

“ತನ್ನಂತೆ ಪರರಬಗೆದೊಡೆ ಕೈಲಾಸಬಿನ್ನಣವಳ್ಳ್ಳು” ಎಂಬ ಸರ್ವಜ್ಞ ಕವಿಯ ಉಕ್ತಿಯು ಮನನೀಯವಾಗಿದೆ. ಖರೇ ಆಸ್ಥೆಯಿಂದಾಗಲಿ, ತೋರಿಕೆಯ ಡಂಭಾಚಾರದ ಆಸ್ಥೆಯಿಂದಾಗಲಿ ನಾವು ನಮ್ಮ ಕೆಲಸಗಳನು ಹೇಗಾದರೂ ಸಾಗಿಸಿಕೊಳ್ಳುತ್ತಿರುವೆವು. ಆದರೆ ಪರರ ಕೆಲಸದಲ್ಲಿ ನಮ್ಮ ಆ ಡಂಭಾಚಾರದ ಆಸ್ಥೆಯನ್ನು ಕೂಡ ಉಪಯೋಗಿಸ ಹೋಗದೆ, “ಹತ್ತಿದಲ್ಲಿ ಹತ್ತಿತು ಹಾರಿದಲ್ಲಿ ಹಾರಿತು” ಎನ್ನುವಂತೆ ದುರ್ಲಕ್ಷ್ಯಮಾಡುವೆವು. ಇದರಿಂದ ಕಾರ್ಯಕೆಟ್ಟು ಹಾನಿಯೊಗುವ ಮಾನಕ್ಕಿಂತ, ನಮ್ಮ ವೃತ್ತಿಯು ಕೆಟ್ಟು ಪ್ರಗತಿಹೀನವಾಗುವ ಮಾನವು ಹೆಚ್ಚಾಗುವದು. ಆದ್ದರಿಂದ ಪ್ರಗತಿಪರನು ಪ್ರಗತಿಹೊಂದುವದಕ್ಕಾಗಿ ಮಾಡಬೇಕಾದ ಕೆಲಸವನ್ನು ಒಳ್ಳೇ ಆಸ್ಥೆಯಿಂದ ಮಾಡಿ ಪ್ರಗತಿಹೊಂದಬೇಕು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...