Home / ಲೇಖನ / ಇತರೆ / ಪ್ರಗತಿ ಅಥವಾ ದಾಸ್ಯವಿಮೋಚನೆ – ೧೧ನೆಯ ಖಂಡ – ಆಸ್ಥೆ-ಕಾಳಜಿ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೧ನೆಯ ಖಂಡ – ಆಸ್ಥೆ-ಕಾಳಜಿ

“ಹೆಚ್ಚು ಕೆಲಸಮಾಡುವವನಿಗಿಂತ ಕಾಳಜಿಪೂರ್‍ವಕ ಕೆಲಸ ಮಾಡುವವನು ನನಗೆ ಅತ್ಯಂತ ಪ್ರಿಯೆನಾಗುವನು” ಎಂದು ಓರ್ವ ಬ್ರಿಟಿಶ ಮಂತ್ರಿವರ್‍ಯನು ಅಂದಿದ್ದಾನೆ. ಆಚಾರ್ಯರು ಕುದುರೆಯ ಹಿಂದೆಬಿದ್ದದ್ದನ್ನೆಲ್ಲ ತಕ್ಕೊಂಡುಬಾ ಎಂದು ಹೇಳಿದ ಮಾತ್ರದಿಂದ ಬುದ್ಧಿಗೇಡಿ ಭಗವಂತನು ಕುದುರೆಯ ಲದ್ದಿಯನ್ನು ಕೂಡ ಹಸಿಬೆಯಲ್ಲಿ ತುಂಬಿತಂದಂತೆ, ಕಾರ್‍ಯಗಳ ಮಹತ್ವವನ್ನು ತಿಳಿಯದೆ ಕೆಲಸ ಮಾಡುವವರು ಬಹಳ. ಕಾರ್‍ಯದ ಮಹತ್ವ ತಿಳಿಯುವದಕ್ಕೆ ಮನಸ್ಸಿನಲ್ಲಿ ಆಸ್ಥೆ-ಕಾಳಜಿ ವಹಿಸಬೇಕಾಗುವದು. ಆಸ್ಥೆಯು ಬೆಳೆ ಬೆಳೆದಂತೆ ಪ್ರಯತ್ನಗಳು ಎಂದೂ ನಿರರ್‍ಥಕವಾಗುವದಿಲ್ಲ.

ಹಿಂದಕ್ಕೆ ಆಗಿ ಹೋದ ಮಂತ್ರಿವರ್‍ಯ ಯೋಗಂಧರಾಯಣ, ಅಮಾತ್ಯರಾಕ್ಷಸ ಮೊದಲಾದವರು ಅತ್ಯಂತ ಆಸ್ಥೆಯಿಂದ ಕೆಲಸಮಾಡುತ್ತಿದ್ದದರಿಂದಲೇ ಅವರು ಸುಪ್ರಸಿದ್ಧ ಪ್ರಧಾನರಾಗಿದ್ದರು. ಮೈಸೂರ ಮಾಜಿ ದಿವಾಣರಾದ ಸರ ಶೇಷಾದ್ರಿ ಅಯ್ಯನವರು ಒಳ್ಳೇ ಆಸ್ಥೆಯಿಂದ ಕಾರ್ಯಭಾರವನ್ನು ಸಾಗಿಸಿದ್ದರಿಂದಲೇ ಅಂಥ ಕಠಿಣ ಪ್ರಸಂಗದಲ್ಲಿ ಕೂಡಾ ಮೈಸೂರ ರಾಜ್ಯವು ಪ್ರಗತಿಯನ್ನು ಹೊಂದಿತು. ನಮ್ಮ ವಿಷಯಕ್ಕೇ ನಮ್ಮಲ್ಲಿ ಆಸ್ಥೆಯಿಲ್ಲದಿರಲು ಮಂದಿಯ ಬಗ್ಗೆ ನಾವು ಆಸ್ಥೆ ಪಡುವ ಬಗೆಯಾದರೂ ಹೇಗೆ?

“ತನ್ನಂತೆ ಪರರಬಗೆದೊಡೆ ಕೈಲಾಸಬಿನ್ನಣವಳ್ಳ್ಳು” ಎಂಬ ಸರ್ವಜ್ಞ ಕವಿಯ ಉಕ್ತಿಯು ಮನನೀಯವಾಗಿದೆ. ಖರೇ ಆಸ್ಥೆಯಿಂದಾಗಲಿ, ತೋರಿಕೆಯ ಡಂಭಾಚಾರದ ಆಸ್ಥೆಯಿಂದಾಗಲಿ ನಾವು ನಮ್ಮ ಕೆಲಸಗಳನು ಹೇಗಾದರೂ ಸಾಗಿಸಿಕೊಳ್ಳುತ್ತಿರುವೆವು. ಆದರೆ ಪರರ ಕೆಲಸದಲ್ಲಿ ನಮ್ಮ ಆ ಡಂಭಾಚಾರದ ಆಸ್ಥೆಯನ್ನು ಕೂಡ ಉಪಯೋಗಿಸ ಹೋಗದೆ, “ಹತ್ತಿದಲ್ಲಿ ಹತ್ತಿತು ಹಾರಿದಲ್ಲಿ ಹಾರಿತು” ಎನ್ನುವಂತೆ ದುರ್ಲಕ್ಷ್ಯಮಾಡುವೆವು. ಇದರಿಂದ ಕಾರ್ಯಕೆಟ್ಟು ಹಾನಿಯೊಗುವ ಮಾನಕ್ಕಿಂತ, ನಮ್ಮ ವೃತ್ತಿಯು ಕೆಟ್ಟು ಪ್ರಗತಿಹೀನವಾಗುವ ಮಾನವು ಹೆಚ್ಚಾಗುವದು. ಆದ್ದರಿಂದ ಪ್ರಗತಿಪರನು ಪ್ರಗತಿಹೊಂದುವದಕ್ಕಾಗಿ ಮಾಡಬೇಕಾದ ಕೆಲಸವನ್ನು ಒಳ್ಳೇ ಆಸ್ಥೆಯಿಂದ ಮಾಡಿ ಪ್ರಗತಿಹೊಂದಬೇಕು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...