ಮಂಡೇಲಾ

ಬಿಳಿಯ ರಾತ್ರಿಗಳಲ್ಲಿ ಕರಿಯ ಮಿಂಚಾದವನು
ಹಗಲು ಹರಿದಾಡುತ್ತ ಕೆಂಪು ಹೆಗಲಾದವನು
ಬಿಳಿ ಕಸದ ಬಂಡಿಯನು ಹೊರಗೆಳೆಯುತ್ತ ಹೋಗಿ
ಜಾರ ಜೇಲಿನ ಒಳಗೆ ಒಂಟಿ ಬಯಲಾದವನು.

ಶ್ವೇತ ಸೆರೆಯಲ್ಲಿ ಸೂರ್‍ಯ ಕುರುಡಲ್ಲಿ
ಬಿಳಿಯ ಬತ್ತಿಯ ಹೊಸೆದ ಕಪ್ಪು ಕಿರಣ
ಮಗ್ಗಿ ಹೇಳುವ ಮಹಾ ಬುದ್ಧಿವಂತರೆ ಕೇಳಿ
ಮುಗ್ಗಿ ಹೋದವು ಮಾತು ಕಾಲಹರಣ.

ಮಂಡೇಲ ಮಾನವತೆ ಗುಡುಗು ಮಿಂಚಿನಮಣ್ಣು
ಸಿಡಿದ ಕಣಕಣದಲ್ಲು ಕ್ರಾಂತಿ ಕಣ್ಣು
ಕುರುಡು ಗೋಡೆಯ ನಡುವೆ ಕನಸುತ್ತ ಕೂತವನು
ಸುತ್ತ ಸರ್‍ಪದ ಕಾಡು ಬಿಳಿಯ ದರ್‍ಪ.

ನುಗ್ಗಿ ಬರುತಿದೆ ಅಲ್ಲಿ ಕನಸು ಮೌಲ್ಯದ ಮಿಡಿತ
ನನಸಿನಾಸೆಯ ಹೊತ್ತು ಕಾಡ ಕತ್ತರಿಸಿ
ಸುಗ್ಗಿ ಬಿಡುಗಡೆ ಸುಖದ ಕಪ್ಪು ಕುಣಿತ
ಕರುಳ ಕದ್ದವರೆಲ್ಲ ಬೇಗ ಉತ್ತರಿಸಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post Henrik Johan Ibsenನ “The Ghosts” ಸಾಂಪ್ರದಾಯಿಕ ಸಾಮಾಜಕ್ಕೊಂದು ಪಾಠ
Next post ನಾನು ನನ್ನ ಇರುವಿಕೆಗೆ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…