ಮಂಡೇಲಾ

ಬಿಳಿಯ ರಾತ್ರಿಗಳಲ್ಲಿ ಕರಿಯ ಮಿಂಚಾದವನು
ಹಗಲು ಹರಿದಾಡುತ್ತ ಕೆಂಪು ಹೆಗಲಾದವನು
ಬಿಳಿ ಕಸದ ಬಂಡಿಯನು ಹೊರಗೆಳೆಯುತ್ತ ಹೋಗಿ
ಜಾರ ಜೇಲಿನ ಒಳಗೆ ಒಂಟಿ ಬಯಲಾದವನು.

ಶ್ವೇತ ಸೆರೆಯಲ್ಲಿ ಸೂರ್‍ಯ ಕುರುಡಲ್ಲಿ
ಬಿಳಿಯ ಬತ್ತಿಯ ಹೊಸೆದ ಕಪ್ಪು ಕಿರಣ
ಮಗ್ಗಿ ಹೇಳುವ ಮಹಾ ಬುದ್ಧಿವಂತರೆ ಕೇಳಿ
ಮುಗ್ಗಿ ಹೋದವು ಮಾತು ಕಾಲಹರಣ.

ಮಂಡೇಲ ಮಾನವತೆ ಗುಡುಗು ಮಿಂಚಿನಮಣ್ಣು
ಸಿಡಿದ ಕಣಕಣದಲ್ಲು ಕ್ರಾಂತಿ ಕಣ್ಣು
ಕುರುಡು ಗೋಡೆಯ ನಡುವೆ ಕನಸುತ್ತ ಕೂತವನು
ಸುತ್ತ ಸರ್‍ಪದ ಕಾಡು ಬಿಳಿಯ ದರ್‍ಪ.

ನುಗ್ಗಿ ಬರುತಿದೆ ಅಲ್ಲಿ ಕನಸು ಮೌಲ್ಯದ ಮಿಡಿತ
ನನಸಿನಾಸೆಯ ಹೊತ್ತು ಕಾಡ ಕತ್ತರಿಸಿ
ಸುಗ್ಗಿ ಬಿಡುಗಡೆ ಸುಖದ ಕಪ್ಪು ಕುಣಿತ
ಕರುಳ ಕದ್ದವರೆಲ್ಲ ಬೇಗ ಉತ್ತರಿಸಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post Henrik Johan Ibsenನ “The Ghosts” ಸಾಂಪ್ರದಾಯಿಕ ಸಾಮಾಜಕ್ಕೊಂದು ಪಾಠ
Next post ನಾನು ನನ್ನ ಇರುವಿಕೆಗೆ

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys