ಗುಡಿಸಲ ಗೋರಿಯಿಂದ

ಒಪ್ಪೊತ್ತಿನ ಊಟದಲ್ಲಿ
ಹರಕು ಬಟ್ಟೆ ಬೆಳಕಿನಲ್ಲಿ
ಅಳುವಿನಲ್ಲಿ ನಗುತ ನಾನು
ಸೆಳವಿನಲ್ಲಿ ತೇಲುತ-
ನೆಲವ ನೆಚ್ಚಿ ಇದ್ದೆನು
ಬೆವರಿನಲ್ಲಿ ಬಾಳುತ
ಒಡಲ ಸುಖ, ಪ್ರೀತಿ ಮಾತು
ಬರುವುದೆಂದು ಕಾಯುತ.

ಮಹಲಿನಿಂದ ಕುರ್ಚಿಯಿಂದ
ಭೂಮಿಯೊಡಲ ಬಿರುಕಿನಿಂದ
ಎದ್ದವಲ್ಲೊ ಎದ್ದವು
ಉರಿಗಣ್ಣಿನ ಕೈಗಳು!
ಹರಿಹಾಯುವ ಮೈಗಳು!

ಮುಚ್ಚಿದಂಥ ಸೆರಗ ಸೆಳೆದು
ಬಡ್ಡಿ ಲೆಕ್ಕ ಹಾಕಿ ಹರಿದು
ಅಸಲಿಗೆಂದು ಆಮರಿದರು
ಎದೆಯ ಮೇಲೆ ಹುಲಿಯ ಉಗುರು.

ನೆಲಕೆ ಬಿದ್ದರಲ್ಲೆ ಒದ್ದು
ಹೊರಳು ಮೈಯ ಮೇಲೆ ಬಿದ್ದು
ಪರಪರನೆ ಹರಿದರೊ
ಮೈಯ ಮಾನದಂಗುಲ!
ಬರೆದರಯ್ಯೊ! ಬರೆದರೊ
ಮಾನಭಂಗದಕ್ಷರ.

ಹಕ್ಕಿ ರೆಕ್ಕೆ ಬಡಿಯುವಾಗ
ಹದ್ದು ಮೀರಿ ಹಲ್ಲೆಯಾಯ್ತು
ಹಸಿವು ಹಗಲು ಒಂದೇ ಆಯ್ತು
ಸೂರ್‍ಯನೆದುರು ಬೆತ್ತಲೆ
ಆದರೂನು ಕತ್ತಲೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಕ್ಕಳನ್ನು ಆಡಲು ಬಿಡಿ
Next post ನನಗೂ ಸ್ವಲ್ಪ

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

cheap jordans|wholesale air max|wholesale jordans|wholesale jewelry|wholesale jerseys