ನೆತ್ತರಲ್ಲಿ ನೆಂದ ಹೂವು

ನನ್ನ ಈ ನಾಡಿನಲ್ಲಿ
ಭವ್ಯ ನಾಮ ಬೀಡಿನಲ್ಲಿ
ಬೇಗೆಯೇ ಬೆಟ್ಟವಾಗಿ
ಉತ್ತರಕ್ಕೆ ಕಾವಲು.
ಬೆವರೆಲ್ಲ ನದಿಗಳಾಗಿ
ಮೂರು ದಿಕ್ಕು ಕಡಲು.

ಅತ್ತ ಬೆಟ್ಟ ಇತ್ತ ನೀರು
ನಡುವೆ ನಗಲು ಎದ್ದವು-
ಮೂಳೆಗಳೇ ಮರಗಳಾಗಿ
ಆಸೆ ಹಸಿರು ಎಲೆಗಳು.
ಕನಸು ಬಿರಿವ ಹೂವು-
ಕಾಯಿ ನೆಲದ ಕಣ್ಗಳು.

ನನ್ನ ಈ ನಾಡಿನಲ್ಲಿ
ಮೇಲೆ ಮಹಲು ಮೋಡದಲ್ಲಿ
ಸೂರ್‍ಯ ಸಿಟ್ಟು ಸಹನೆ ಮೀರಿ
ತೆರೆಯ ಹರಿದು ಬಂದಿತು,
ಬೆಳಕ ಸೆರೆಯ ಬಿತ್ತಿ ಇಲ್ಲಿ
ಕತ್ತಿ ಹಿಡಿದು ನಿಂತಿತು.

ಸೆರೆಯ ಸಂಚು ಸರಳಿನಲ್ಲಿ
ಖಡ್ಗದಾಳಿ ಉರುಳಿನಲ್ಲಿ
ನಗಲು ಎದ್ದ ನೆಲದ ಮರ
ನರಳಿ ಬಿದ್ದವು
ತತ್ತರಿಸಿದ ಹೂವು ಉದುರಿ
ನೆತ್ತರಲ್ಲಿ ನೆಂದವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವಾಲಯ ಸಂಸ್ಕೃತಿಯ ಬಹುಮುಖಿ ಆಯಾಮಗಳು
Next post ಯಾರು ನಿನಗೆ ಸಮಯದಿ

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…