ಪದವಾಗುವ ಪ್ರೀತಿ

ಕಾಡುತ್ತಿವೆ ರಾತ್ರಿಗಳು
ಹಗಲು ಕಟ್ಟಿದ ಇರುಳ ಕೋಟೆ
ಒಳಗೆ ಒಂದೇ ಸಮ ಕತ್ತಿವರಸೆ
ಪ್ರಾಣ ಹೋಗದ ಸಾವುಗಳು
ಸದ್ದು ಮಾಡದ ನೋವುಗಳ.

ಕತ್ತಲ ಸೋನೆ ಚರಿತ್ರೆಯಲ್ಲಿ
ತೋಯ್ದ ಮೆದುಳ ನೆಲದಲ್ಲಿ
ಮನಸ್ಸಿನ ಬೀಜ ಬಿರಿದು
ತಿಕ್ಕಾಟವಾಗುತ್ತಲೇ ತೆಕ್ಕೆಯಾಗುವ ರೀತಿ
ಪರದಾಡುತ್ತಲೇ ಪದವಾಗುವ ಪ್ರೀತಿ!

ಉರಿವ ಒಲೆ ಮೇಲೆ ತಲೆ ಬಾಣಲೆ
ಕೊತ ಕೊತ ಕುದಿಯಲ್ಲಿ ಎದ್ದು ಬಿದ್ದೇಳುವ ಎದೆ
ಹೆಚ್ಚಾದರೆ ಸೀದ ವಾಸನೆ ಕಚ್ಚುತ್ತದೆ
ಕಮ್ಮಿಯಾದರೆ ಅರೆ ಬರೆ ಹಸಿ-
ವು ಹೆಚ್ಚುತ್ತದೆ.

ಈ ವೈಪರೀತ್ಯದ ಉರಿ ಗಾಯ ಕಾಣುವುದಿಲ್ಲ
ಮೋಡ ಮುಚ್ಚಿದ ಬೆಳಕು ನೋವು ನಿಲ್ಲುವುದಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಂಬಯಿ ಮತ್ತು ವ್ಯಾಸರಾಯ ಬಲ್ಲಾಳ – ‘ಉತ್ತರಾಯಣ’ದ ಮೂಲಕ
Next post ಸಂಸಾರವೆಂಬ ಸಾಗರದಲ್ಲಿ

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…