Home / ಕವನ / ಕವಿತೆ / ಕರಿಯ ಪ್ರತಿಮೆ

ಕರಿಯ ಪ್ರತಿಮೆ

ನಮ್ಮೂರಿನ ಕರಿಯ
ಕಂಠದೊಳಗಿನ ಕೆಂಡದುರಿಯಲ್ಲಿ
ಕೊಂಡ ಹಾಯುವ ಗೆಳೆಯ
ಬಯಸುತ್ತಾನೆ ಮನೆಯ
ಕನಸುತ್ತಾನೆ ಬೆಳೆಯ-
ತೆನ ತೂಗೀತು! ಮನೆ ಮಾಗೀತು
ಕುಡಿಕೆ ಮಡಕೆಗಳಲ್ಲಿ ಒರತೆ ಹುಟ್ಟೀತು ಎಂದು?

ಆಗಸ್ಟ್ ಹದಿನೈದು ಹರಿಯಿತು
ಚಿಂದಿ ಬಾಳಿನ ಬಟ್ಟೆ
ಜನವರಿ ಇಪ್ಪತ್ತಾರು ಮರೆಯಿತು
ಜನಮನದ ಚಿಟ್ಟೆ
ಏಪ್ರಿಲ್ ಹದಿನಾಲ್ಕು- ಮತ್ತೊಂದು ಮೆಲುಕು.

ಅಂಬೇಡ್ಕರ್ ಆತ್ಮವಿಶ್ವಾಸ ಹರಿದದ್ದು
ಕೆಂಡಮಂಡಲ ಮನಸಿನಲ್ಲಿ
ಚಲನೆ ಚಕ್ರ ಜಡತೆಯನ್ನು ಜರೆದದ್ದು
ಕೊಳಕು ಮಂಡಲ ಮೆದುಳಿನಲ್ಲಿ.

ನಮ್ಮ ಕರಿಯ, ಮೇಲೆದ್ದು ಮೆರವಣಿಗೆ ಸೇರಿದ
ಹೊರಾಟ ಹೊತ್ತಿ ಉರಿಯುವಾಗ ಒಳಗೇ ಕರಗಿದ
ಕಾಣಲೇಬೇಕು ಅಂಬೇಡ್ಕರ್ ಎಂದು ಕೊರಗಿದ
ಬೀದಿ ಬೀದಿಯಲ್ಲಿ ಬೆವರು ಬಿತ್ತಿ ಕಂಗಾಲಾಗಿ ತಿರುಗಿದ

ಬಿರುಗಾಳಿಯಲ್ಲಿ ತರಗೆಲೆ ಹಾರುತ್ತಿರುವಾಗ
ವಿಧಾನಸೌಧದ ಮೆಟ್ಟಿಲು ಮೆಟ್ಟಲು ಬಂದ
ಕೂಗುತ್ತಿರುವ ಕಂಠಗಳು ಸೊಂಟಮುರಿದು
ಬಿಕ್ಕುವ ಮನಸ್ಸು ಕಣ್ಣಿಗೆ ಬಂದು ನೋಡಿದ-

ಕರಿಯ ಮೈ ಕಲ್ಲಾಗಿ ನಿಂತಿರುವ
ಅಂಬೇಡ್ಕರ್ ಪ್ರತಿಮೆ ಕಂಡ ಕರಿಯ
ಅಂಬೆಗಾಲಿಡುತ್ತ ಹತ್ತಿರ ಬಂದ
ತನಗೇ ಕೋಟು ಬೂಟು ಹಾಕಿ
ಕಲ್ಲು ನಿಲ್ಲಿಸಿದಂತೆ ಕಂಡು
ದೊಪ್ಪನೆ ಮೂರ್ಛೆಗೆ ಸಂದ!

ಅಂಬೇಡ್ಕರ್ ಕೈ ಕೆಳಗಿಳಿಯಲಿಲ್ಲ
ಕರಿಯನ ಮೈ ಸವರಲಿಲ್ಲ!
ಮೂರ್ಛೆಯೊಂದಿಗೆ ಮಾತಾಡಲಿಲ್ಲ
ಯಾಕೆಂದರೆ ಅದು ಸರ್‍ಕಾರಿ ಪ್ರತಿಮೆ
ಆಚರಣೆಗೆ ಹುಟ್ಟಿದ ಹದಿನಾಲ್ಕರ ಒಲುಮೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...