Home / ಕವನ / ಕವಿತೆ / ಕರಿಯ ಪ್ರತಿಮೆ

ಕರಿಯ ಪ್ರತಿಮೆ

ನಮ್ಮೂರಿನ ಕರಿಯ
ಕಂಠದೊಳಗಿನ ಕೆಂಡದುರಿಯಲ್ಲಿ
ಕೊಂಡ ಹಾಯುವ ಗೆಳೆಯ
ಬಯಸುತ್ತಾನೆ ಮನೆಯ
ಕನಸುತ್ತಾನೆ ಬೆಳೆಯ-
ತೆನ ತೂಗೀತು! ಮನೆ ಮಾಗೀತು
ಕುಡಿಕೆ ಮಡಕೆಗಳಲ್ಲಿ ಒರತೆ ಹುಟ್ಟೀತು ಎಂದು?

ಆಗಸ್ಟ್ ಹದಿನೈದು ಹರಿಯಿತು
ಚಿಂದಿ ಬಾಳಿನ ಬಟ್ಟೆ
ಜನವರಿ ಇಪ್ಪತ್ತಾರು ಮರೆಯಿತು
ಜನಮನದ ಚಿಟ್ಟೆ
ಏಪ್ರಿಲ್ ಹದಿನಾಲ್ಕು- ಮತ್ತೊಂದು ಮೆಲುಕು.

ಅಂಬೇಡ್ಕರ್ ಆತ್ಮವಿಶ್ವಾಸ ಹರಿದದ್ದು
ಕೆಂಡಮಂಡಲ ಮನಸಿನಲ್ಲಿ
ಚಲನೆ ಚಕ್ರ ಜಡತೆಯನ್ನು ಜರೆದದ್ದು
ಕೊಳಕು ಮಂಡಲ ಮೆದುಳಿನಲ್ಲಿ.

ನಮ್ಮ ಕರಿಯ, ಮೇಲೆದ್ದು ಮೆರವಣಿಗೆ ಸೇರಿದ
ಹೊರಾಟ ಹೊತ್ತಿ ಉರಿಯುವಾಗ ಒಳಗೇ ಕರಗಿದ
ಕಾಣಲೇಬೇಕು ಅಂಬೇಡ್ಕರ್ ಎಂದು ಕೊರಗಿದ
ಬೀದಿ ಬೀದಿಯಲ್ಲಿ ಬೆವರು ಬಿತ್ತಿ ಕಂಗಾಲಾಗಿ ತಿರುಗಿದ

ಬಿರುಗಾಳಿಯಲ್ಲಿ ತರಗೆಲೆ ಹಾರುತ್ತಿರುವಾಗ
ವಿಧಾನಸೌಧದ ಮೆಟ್ಟಿಲು ಮೆಟ್ಟಲು ಬಂದ
ಕೂಗುತ್ತಿರುವ ಕಂಠಗಳು ಸೊಂಟಮುರಿದು
ಬಿಕ್ಕುವ ಮನಸ್ಸು ಕಣ್ಣಿಗೆ ಬಂದು ನೋಡಿದ-

ಕರಿಯ ಮೈ ಕಲ್ಲಾಗಿ ನಿಂತಿರುವ
ಅಂಬೇಡ್ಕರ್ ಪ್ರತಿಮೆ ಕಂಡ ಕರಿಯ
ಅಂಬೆಗಾಲಿಡುತ್ತ ಹತ್ತಿರ ಬಂದ
ತನಗೇ ಕೋಟು ಬೂಟು ಹಾಕಿ
ಕಲ್ಲು ನಿಲ್ಲಿಸಿದಂತೆ ಕಂಡು
ದೊಪ್ಪನೆ ಮೂರ್ಛೆಗೆ ಸಂದ!

ಅಂಬೇಡ್ಕರ್ ಕೈ ಕೆಳಗಿಳಿಯಲಿಲ್ಲ
ಕರಿಯನ ಮೈ ಸವರಲಿಲ್ಲ!
ಮೂರ್ಛೆಯೊಂದಿಗೆ ಮಾತಾಡಲಿಲ್ಲ
ಯಾಕೆಂದರೆ ಅದು ಸರ್‍ಕಾರಿ ಪ್ರತಿಮೆ
ಆಚರಣೆಗೆ ಹುಟ್ಟಿದ ಹದಿನಾಲ್ಕರ ಒಲುಮೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...