ಹೆಣದ ಕತೆ

ಬೀದಿ ಬದಿಯಲ್ಲಿ ಬಿದ್ದ ಹೆಣ ನಾನು
ಶತಶತಮಾನದ ಕತೆಗಾರ
ಕತ್ತಲು ಬೆಳಕಿನ ಕಾಳಗ ನಡೆದು
ಸಾವಿರ ಸಾವಿನ ಸರದಾರ.

ರಾಜರ ನಡುವೆ ನಡೆಯಿತು ಯುದ್ಧ
ಸಿಂಹಾಸನದ ಸಲುವಾಗಿ
ಕುದುರೆಯ ಗೊರಸು ಕತ್ತಿಯ ಬಿರುಸು
ಬಿದ್ದೆನು ಕೆಳಗೆ ನೆಲವಾಗಿ.

ನೆಣ ನೆತ್ತರಿನ ಓಕುಳಿ ನಡುವೆ
ನಕ್ಕರು ರಾಜರು ಠೀವಿಯಲಿ
ನರಳಿದ ಕಾಲವು ಉರುಳುತ ಮುಂದೆ
ಬರೆಯಿತು ಕತೆಯನು ಕೋವಿಯಲಿ

ಓಟಿನ ಪೆಟ್ಟಿಗೆ ಪೀಠದ ಇಟ್ಟಿಗೆ
ನಡುವಿನ ನೆತ್ತರ ದನಿ ನಾನು
ಹಿಂದೂ ಮುಸ್ಲಿಂ ಸಿಖ್ಖರು ಕ್ರೈಸ್ತರು
ಎಲ್ಲರಿಗೊಂದೇ ಕತೆ ನಾನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯೂರಿಪಿಡಿಸ್‌ನ Medea – ಪ್ರತಿಕಾರದ ದಳ್ಳುರಿ
Next post ಅಕ್ಷರದೊಳ್ ಅನ್ನವನಿತ್ತ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…