ಮಿಡಿನಾಗರ ಸಾಲು

ಎತ್ತ ನೋಡುವಿರಿ ಇತ್ತ ಬನ್ನಿರಿ
ಸೋಜಿಗ ತುಂಬಿದ ನೆಲದೆಡೆಗೆ
ಬೆಳದಿಂಗಳ ಬೆವರು ಬಿಸಿಲಿನ ತಂಪು
ಸಾವೇ ಹುಟ್ಟು ಹುಟ್ಟೇ ಸಾವು
ಸೂಜಿ-ಗಲ್ಲಿನ ತಲೆಯೊಳಗೆ.

ಗಿರಗಿರ ತಿರುಗುವ ಚಕ್ರದ ಮೇಲೆ
ಮೂಡದು ಮಡಕೆ
ಒಣಗಿದ ಮಾತನು ಹೆಣೆದೂ ಹೆಣೆದು
ತಾಳದು ತಡಿಕೆ.

ಸೂರ್‍ಯನ ಬಿಸಿಲಿಗೆ ಸೂರಿನ ಕೆಳಗೆ
ಸನ್ಯಾಸಿಯ ಬದುಕು
ಬೆಳದಿಂಗಳ ಬೆಳಕಿನ ಸುಂದರ ರಾತ್ರಿಗೆ
ಹವ್ಯಾಸಿಯ ಕನಸು.

ಕಾಣದ ಲೋಕದ ಏಣಿಯ ಮೇಲೆ
ಕಣ್ಮುಚ್ಚಿದ ಕಾಲು
ಕಾಣುವ ಕತ್ತಲ ಗೋರಿಯ ಒಳಗೆ
ಮಿಡಿನಾಗರ ಸಾಲು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂತೋಷ
Next post ಬಾ ಎನ್ನೆದೆಯ ಗುಡಿಯಲಿ ಬೆಳಗು

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…