Home / ಕವನ / ಕವಿತೆ / ಬೆತ್ತಲೆ ಕಿರೀಟ

ಬೆತ್ತಲೆ ಕಿರೀಟ

ಹಗಲು ಅಂಬಾರಿಯ ಮೇಲೆ
ಮೆರವಣಿಗೆ ಹೊರಟಿತ್ತು ಬೀದಿಯಲಿ
ಹೆಗಲು ಕೊಟ್ಟವರ ಎದೆಯ ಮೇಲೆ
ಬಹುಪರಾಕು ಬರೆದಿತ್ತು ನೆತ್ತರಲ್ಲಿ.

ದಾರಿ ಬಿಡಿರೊ ಅಣ್ಣ ದಾರಿ ಬಿಡಿರೊ
ಹಗಲು ರಾಜನಿಗೆ ದಾರಿ ಬಿಡಿರೊ
ಬಾಯಿ ಬಿಡಿರೊ ಅಣ್ಣ ಬಾಯಿ ಬಿಡಿರೊ
ನಗಲು ನೀವೆಲ್ಲ ತೆರಿಗೆ ಕೊಡಿರೊ.

ಇಲ್ಲಿ ಬೀದಿಗಳೆಲ್ಲ ಬೆವರ ಬಂದೀಖಾನೆ
ಹಗಲು ರಾಜನಿಗೆ ಬೆತ್ತಲೆ ಕಿರೀಟ
ಎತ್ತ ನೋಡಿದರತ್ತ ಚಿತ್ತಾದ ಬದುಕು
ಬಯಲು ಬೆಳಕಿಗೆ ಇಲ್ಲಿ ಕತ್ತಲೆ ಕಾಟ.

ಕದ್ದು ಕೂತಿರುವ ಕತ್ತಲ ತೋಳ
ಹಾರಿ ಬಂದೀತು ಹೆಗಲ ಮೇಲೆ
ಜಿದ್ದು ಜೀವನವಾಗಿ ಸ್ಪರ್ಧೆ ಹುಟ್ಟಿದೆ ಇಲ್ಲಿ
ನೆಗೆದು ಕೂತೀತು ಹೆಗಲ ಮೇಲೆ.

ಹಗಲ ಹಾದರದಲ್ಲಿ ಹುಟ್ಟಿಬಂದವರ
ಕತ್ತಲಿನ ಕಾಮಕ್ಕೆ ತುತ್ತಾದ ಬಾಂಧವರೆ
ಸುಟ್ಟು ಕರುಕಾದ ಹೊಟ್ಟೆ ಹೊತ್ತವರೆಲ್ಲ
ಒಂದಾಗಿ ಬದುಕುವುದೇ ಬೇವು ಬೆಲ್ಲ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...