Home / ಕವನ / ಕವಿತೆ / ಸಮಯ ಸಾಕಾಗುವುದಿಲ್ಲ

ಸಮಯ ಸಾಕಾಗುವುದಿಲ್ಲ

ಸಮಯ ಸಾಕಾಗುವುದಿಲ್ಲ
ಎನ್ನುವುದೊಂದು ನೆಪ ಅಷ್ಟೇನೇ|
ತನ್ನೆಲ್ಲಾ ಇಷ್ಟಾರ್ಥಳಿಗಾಗಿ
ಸಮಯ ಸರಿಹೊಂದಿಸಿಕೊಳ್ಳುವ ನಾವು|
ಬೇರೆಲ್ಲಾದರಲ್ಲಿ ಮುಂದು
ಬೇಡವೆನಿಸಿರುವುದಕೆ ಈ ಸೋಗು||

ದೇವಸ್ಥಾನದ ಮಹಾಮಂಗಳಾರತಿ
ಸಮಯಕ್ಕೆ ಸರಿಯಾಗಿ ಹೋಗಲು
ಸಮಯ ಸಾಕಾಗದು|
ಆದರೆ ಸಿನೆಮಾಕ್ಕೆ ಹೋಗಲು
ಎನ್ನೆಲ್ಲಾ ತಯಾರಿ ನಡೆಸಿ
ಅರ್ಧಗಂಟೆ ಮುಂಚೆನೇ ಹಾಜರು|
ವಿಮಾನ ಪ್ರಯಾಣಕ್ಕೆಂದು
ಹೊರಟರೆ ಎರಡು ಗಂಟೆ ಮೊದಲು|
ಯಾರದಾದರು ಮದುವೆಗೆ
ಹೋಗಬೇಕೆಂದರೆ ಅರ್ಧ ದಿನ ಮೊದಲು
ಮಧುಮಗನ ನಾವೇ ಹೋಗಿ ತಯಾರಿ ಮಾಡಲು||

ಮಕ್ಕಳಿಗೆ ಓದಿಕೋ ಎಂದರೆ
ಕೈಕಾಲು ನೋವು, ಹೊಟ್ಟೆ ಹಸಿವು
ಸಮಯವು ತುಂಬಾ ಕಡಿಮೆ|
ಅದೇ ಆಟ‌ಆಡು ಎಂದರೆ ಸಾಕು
ಸಮಯದ ಪರಿವೇ ಇರುವುದಿಲ್ಲ|
ಬೇರೆಯವರದೇನಾದರು ಪುಕ್ಕಟೆ
ಸಾಲ ಪಡೆದರೆ ಹಿಂದಿರುಗಿಸಲು ಬೇಜಾರು
ನಿನ್ನದೇನಾದರೂ ಇತರರಿಗೆ ಸಾಲ
ನೀಡಿದರೆ ಆವರನು ಪದೇಪದೇ ಪೀಡಿಸುವುದು||

ವಠಾರದವರ ತಿಥಿ ಊಟಕೆ
ನಾವೇ ಮೊದಲು
ಭಕ್ಷ ಭೋಜನದ ರುಚಿ ನೋಡಲು|
ಚುನಾವಣೆ ಬಂತೆಂದರೆ ತಾನೇ ಮೊದಲು
ರಾಜಕಾರಣಿಗಳ ಕೈ ಕುಲುಕಲು|
ಕ್ರಿಕೇಟ್ ಇರುವದಿನ ಕೆಲಸಕೆ
ರಜಾ ಬೀಳುತ್ತೆ ಮ್ಯಾಚ್ ನೋಡಲು||

ಹೆಂಗಳೆಯರಿಗಂತೂ ಸಮಯ
ಸಾಕಾಗುವುದಿಲ್ಲ, ಎಲ್ಲಾ
ಧಾರಾವಾಹಿಗಳ ನೋಡಲು|
ರಸ್ತೆ ಅಪಘಾತವಾದರೂ ಅಲ್ಲಿಯೂ ಮೊದಲು
ಊರಲ್ಲೇನಾದರು ಅವಘಡ
ಸಂಭವಿಸಿದರೂ ತಾನೇ ಮೊದಮೊದಲು|
ಬಿಟ್ಟಿ ಯಾವುದಾದರೂ ಸರಿ, ಅದಕೆಲ್ಲಾ
ಅಂಜಿಕೆ ಮುಜುಗರವೇನಿಲ್ಲ
ಎಲ್ಲದಕೂ ಮೊದಮೊದಲು||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...