Home / ಕವನ / ಕವಿತೆ / ಸಮಯ ಸಾಕಾಗುವುದಿಲ್ಲ

ಸಮಯ ಸಾಕಾಗುವುದಿಲ್ಲ

ಸಮಯ ಸಾಕಾಗುವುದಿಲ್ಲ
ಎನ್ನುವುದೊಂದು ನೆಪ ಅಷ್ಟೇನೇ|
ತನ್ನೆಲ್ಲಾ ಇಷ್ಟಾರ್ಥಳಿಗಾಗಿ
ಸಮಯ ಸರಿಹೊಂದಿಸಿಕೊಳ್ಳುವ ನಾವು|
ಬೇರೆಲ್ಲಾದರಲ್ಲಿ ಮುಂದು
ಬೇಡವೆನಿಸಿರುವುದಕೆ ಈ ಸೋಗು||

ದೇವಸ್ಥಾನದ ಮಹಾಮಂಗಳಾರತಿ
ಸಮಯಕ್ಕೆ ಸರಿಯಾಗಿ ಹೋಗಲು
ಸಮಯ ಸಾಕಾಗದು|
ಆದರೆ ಸಿನೆಮಾಕ್ಕೆ ಹೋಗಲು
ಎನ್ನೆಲ್ಲಾ ತಯಾರಿ ನಡೆಸಿ
ಅರ್ಧಗಂಟೆ ಮುಂಚೆನೇ ಹಾಜರು|
ವಿಮಾನ ಪ್ರಯಾಣಕ್ಕೆಂದು
ಹೊರಟರೆ ಎರಡು ಗಂಟೆ ಮೊದಲು|
ಯಾರದಾದರು ಮದುವೆಗೆ
ಹೋಗಬೇಕೆಂದರೆ ಅರ್ಧ ದಿನ ಮೊದಲು
ಮಧುಮಗನ ನಾವೇ ಹೋಗಿ ತಯಾರಿ ಮಾಡಲು||

ಮಕ್ಕಳಿಗೆ ಓದಿಕೋ ಎಂದರೆ
ಕೈಕಾಲು ನೋವು, ಹೊಟ್ಟೆ ಹಸಿವು
ಸಮಯವು ತುಂಬಾ ಕಡಿಮೆ|
ಅದೇ ಆಟ‌ಆಡು ಎಂದರೆ ಸಾಕು
ಸಮಯದ ಪರಿವೇ ಇರುವುದಿಲ್ಲ|
ಬೇರೆಯವರದೇನಾದರು ಪುಕ್ಕಟೆ
ಸಾಲ ಪಡೆದರೆ ಹಿಂದಿರುಗಿಸಲು ಬೇಜಾರು
ನಿನ್ನದೇನಾದರೂ ಇತರರಿಗೆ ಸಾಲ
ನೀಡಿದರೆ ಆವರನು ಪದೇಪದೇ ಪೀಡಿಸುವುದು||

ವಠಾರದವರ ತಿಥಿ ಊಟಕೆ
ನಾವೇ ಮೊದಲು
ಭಕ್ಷ ಭೋಜನದ ರುಚಿ ನೋಡಲು|
ಚುನಾವಣೆ ಬಂತೆಂದರೆ ತಾನೇ ಮೊದಲು
ರಾಜಕಾರಣಿಗಳ ಕೈ ಕುಲುಕಲು|
ಕ್ರಿಕೇಟ್ ಇರುವದಿನ ಕೆಲಸಕೆ
ರಜಾ ಬೀಳುತ್ತೆ ಮ್ಯಾಚ್ ನೋಡಲು||

ಹೆಂಗಳೆಯರಿಗಂತೂ ಸಮಯ
ಸಾಕಾಗುವುದಿಲ್ಲ, ಎಲ್ಲಾ
ಧಾರಾವಾಹಿಗಳ ನೋಡಲು|
ರಸ್ತೆ ಅಪಘಾತವಾದರೂ ಅಲ್ಲಿಯೂ ಮೊದಲು
ಊರಲ್ಲೇನಾದರು ಅವಘಡ
ಸಂಭವಿಸಿದರೂ ತಾನೇ ಮೊದಮೊದಲು|
ಬಿಟ್ಟಿ ಯಾವುದಾದರೂ ಸರಿ, ಅದಕೆಲ್ಲಾ
ಅಂಜಿಕೆ ಮುಜುಗರವೇನಿಲ್ಲ
ಎಲ್ಲದಕೂ ಮೊದಮೊದಲು||
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...