ಸದಾ ನಿನ್ನ ಧ್ಯಾನಿಪೆ

ಸದಾ ನಿನ್ನ ಧ್ಯಾನಿಪೆ ತಂದೆ
ದರುಶನ ಕರುಣಿಸೆಯಾ||
ಭವಬಂಧನ ಬಿಡಿಸೋ
ದಾರಿಯ ತೋರುವೆಯಾ||

ಕಷ್ಟವ ಕರಗಿಸೋ ಕರ್ಮವ ತೊಡಿಸಿ
ಕಾಪಾಡ ಬಯಸುವೆಯಾ|
ನ್ಯಾಯದಿ ನೆಡೆಸಿ ಅನ್ಯಾಯವನಳಿಸಿ
ಸತ್ಯಾನಂದ ಗೊಳಿಸುವೆಯಾ||

ಬಂಧುವು ನೀನೆನಿಸೋ ಭಾಗ್ಯವ ಕರುಣಿಸಿ
ಭವಸಾಗರ ದಾಟಿಸೆಯಾ|
ಅರಿಯದೆ ಜರುಗಿದ ತಪ್ಪುಗಳ ಮನ್ನಿಸಿ
ನನ್ನನು ಕ್ಷಮಿಸುವೆಯಾ||

ನೀ ದಯಾಸಿಂಧು ಎನ್ನುತ ಅರಸಿ
ಮನದಲೇ ನಮಿಸಿ ಕೋಟಿ ಪ್ರಾರ್ಥನೆ ಸಲ್ಲಿಸುವೆ|
ಕಾದಿರುವೆ ನಿನ್ನಯ ದರುಶನ ಅಭಯವ
ಕರುಣಾಳುಬಂಧು ನೀ ದಯಪಾಲಿಸೆಯಾ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂತರಂಗ-ಬಹಿರಂಗ
Next post ಮಿಂಚಿನ ಮಾಟ

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…