ಯಾರು ನಿನಗೆ ಸಮಯದಿ

ಯಾರು ನಿನಗೆ ಸಮಯದಿ
ಸಹಾಯ ಮಾಡುವರೋ
ಅವರ ಸ್ನೇಹ ಮಾಡಿಕೊ|
ಯಾರು ನಿನ್ನ ಹಿತವ ಕೋರುವರೋ
ಅವರನೇ ಬಂಧು ಎಂದುಕೊ|
ಎಲ್ಲೇ ಇರಲಿ ಹೇಗೇ ಇರಲಿ
ಒಳ್ಳೆಯತನವ ಬೆಳೆಸಿಕೊ||

ನಿನ್ನ ಬಾಲ್ಯ ಗೆಳೆಯ ನಿನಗೆ
ಸಮಯದಿ ಸಿಗದಿರಬಹುದು|
ನಿನ್ನ ಆತ್ಮೀಯ ಬಂಧುಗಳು
ತಟ್ಟನೆ ಕಷ್ಟಕಾಗದಿರಲೂ ಬಹುದು|
ಸಮಯಗೊದಗಿದವರೇ ನಿನ್ನ ಸ್ನೇಹಿತರು
ಹತ್ತಿರವಿದ್ದವರೇ ನಿನ್ನ ಬಂಧುಗಳೆಂದುಕೊ||

ನೀನೂ ನಿನ್ನ ಸ್ನೇಹಿತನಿಗೆ
ಸಮಯಕಾಗದಿರಬಹುದು!
ಎಂದಮಾತ್ರಕೆ ನೀ ಅವನ
ಆಪ್ತವಿತ್ರನಲ್ಲವೇನು?|
ಅಷ್ಟೂ ದಿನದ ನಿನ್ನ ಸ್ನೇಹವನು
ಮರೆಯಲು ಸಾಧ್ಯವೇನು?
ಬಂಧುಗಳು ಸದಾ ಜೊತೆಗೆ
ಇಲ್ಲದಲೇ‌ಇರಬಹುದು
ಅಂದಮಾತ್ರಕೆ ಬಂಧುಗಳೇ
ಅಲ್ಲವೇನು?||

ಯಾರದೆಷ್ಟು ಪುಣ್ಯ ಇರುವುದೋ
ಅಷ್ಟೇ ಭಾಗ್ಯ ಸಿಗುವುದು|
ಯಾರಲಿ ನಿನ್ನ ಋಣವಿರುವುದೋ
ಅದುವೇ ಮಾತ್ರ ನಿನಗೆ ಲಭಿಸುವುದು|
ಸಂಬಂಧಗಳ ಬಂಧ ಅತೀ ಸೂಕ್ಷ್ಮ
ಒರೆಗಚ್ಚುವುದು ಅನುಮಾನಿಸುವುದು ತರವೇ|
ಗಾಜಿನಮನೆಯಲ್ಲಿದ್ದುಕೊಂಡು
ಬೇರೆಯವರ ಗಾಜಿನಮನೆಗೆ
ಕಲ್ಲು ತೂರುವುದು ನ್ಯಾಯವೇ?||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆತ್ತರಲ್ಲಿ ನೆಂದ ಹೂವು
Next post ಕೊರಗುತಿರುವೆದೆಗೆ ಬರೆ

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…