Home / ಕವನ / ಕವಿತೆ / ಇಂದಿನ ವಿವಾಹ ವಿಚ್ಚೇದನ

ಇಂದಿನ ವಿವಾಹ ವಿಚ್ಚೇದನ

ಇಂದಿನ ವಿವಾಹ ವಿಚ್ಚೇದನ
ಹೆಣ್ಣು ಗಂಡಿನ ಬರೀ ಸ್ವಾರ್ಥತನ|
ನಾನೇ ಮೇಲೆಂಬ ಹುಚ್ಚುತನ
ಗಂಡು ಹೆಣ್ಣಿನ ಆತುರಾತುರತನ|
ನವಜೀವನದ ಅರ್‍ಥತಿಳಿಯದ
ಹೆಣ್ಣು ಗಂಡಿನ ಜೀವನ ಪಥನ||

ಇನ್ನೂ ಹಸೆಯು ಆರಿರುವುದಿಲ್ಲ
ಇನ್ನೂ ಚಪ್ಪರ ಸಡಿಲಿಸಿರುವುದಿಲ್ಲ|
ಆಗಲೇ ವಿರೋಧ ಭಾವ
ಎಲ್ಲದಕೂ ಸಿಡಿಮಿಡಿ
ಏನನೋ ಕಳಕೊಂಡಂತೆ ಚಡಪಡಿಕೆ|
ನಾನು ಹೇಳಿದಂತೆಯೇ ನಡೆಯಲಿಲ್ಲವಲ್ಲ
ನನಗೇಕೋ ಸರಿಯೆನಿಸುತ್ತಿಲ್ಲ
ನನಗೆ ಈ ಮದುವೆ ಇಷ್ಟವಿಲ್ಲ||

ಯಾವುದಕ್ಕೂ ತಾಳ್ಮೆಯಿಲ್ಲ
ಎಲ್ಲಾ ಮೂಗಿನ ನೇರಕೆ ನಡೆಯಬೇಕು|
ಯಾರ ಮಾತಿಗೂ ಗೌರವವಿಲ್ಲ
ಎಲ್ಲ ಬರೀ ಒಣ ಪ್ರತಿಷ್ಠೆಯ ಜಂಭ|
ಕಠಿಣ ಪರಿಶ್ರಮವಿಲ್ಲದೆ ಬಂದ ಹಣದ ಬಲ
ಪ್ರೀತಿ ಪ್ರೇಮದ ಅನುಭವದ ಕೊರತೆ
ಸಮಯ ಭರಾಟೆಯ ನಡುವೆ
ಜೀವನದ ಮೌಲ್ಯಗಳ ಹರಾಜಕತೆ||

ಹಿಂದೆ ಅದೆಷ್ಟು ಅರ್‍ಥಪೂರ್‍ಣ
ನಮ್ಮ ಶುಭ ವಿವಾಹ ಬಂಧನ|
ಜನ್ಮ ಜನ್ಮಾಂತರದ ಬಂಧ
ಸಂಬಂಧಗಳ ಋಣಾನುಬಂಧ
ಎನ್ನುವ ಭಾವ, ಭಾವೈಕ್ಯತೆ|
ಎಲ್ಲವೂ ದೈವ ಸಂಕಲ್ಪವೆಂಬ
ಅತೀವ ನಂಬಿಕೆ, ಎಲ್ಲವೂ ಸುಖಾಂತ್ಯ|
ಆದರಿಂದು ಬರಿಯ ನಾಟಕೀಯತೆ
ವಿದ್ಯಾವಂತರೆನಿಸಿಕೊಂಡವರ
ಅವಿವೇಕತನದ ಪರಮಾವಧಿ||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...