ಉದಯಿಸಲಿ ಮತ್ತೊಮ್ಮೆ

ಉದಯಿಸಲಿ ಮತ್ತೊಮ್ಮೆ
ಕನ್ನಡದ ಕಣ್ಮಣಿಗಳು|
ಉದಯಿಸಲಿ ಮತ್ತೊಮ್ಮೆ
ಹಿಂದಿನ ಕನ್ನಡದ ಅದ್ವಿತೀಯ
ಅತಿರಥ ಮಾಹಾರಥರು||

ರಾಷ್ಟ್ರಕವಿ ಕುವೆಂಪು
ವರಕವಿ ಬೇಂದ್ರೆಯಂತವರು|
ಕಡಲ ಭಾರ್ಗವ ಕಾರಂತ,
ಪು.ತಿ.ನಾ, ಗೋಕಾಕಂತವರು|
ಮತ್ತೆ ಬೆಳೆಸಲು ಕನ್ನಡದ ಆಸ್ತಿಯನು
ಬರಲೊಮ್ಮೆ ನಮ್ಮಲ್ಲೊಬ್ಬರು ಮಾಸ್ತಿಯಂತವರು|
ಪದ ರತ್ನಗಳ ಬಿಡಿಸಲ್ಲೊಬ್ಬ ರಾಜರತ್ನಂ
ಮಂಕುತಿಮ್ಮನ ಕಗ್ಗದಂತೆ
ಮತ್ತೆ ಬಾರಿಸಲು ಕನ್ನಡ ಡಿಂಡಿಮ||

ಹುಟ್ಟಿಬರಲಿ ಮತ್ತೆ
ಗದುಗಿನ ಕುಮಾರವ್ಯಾಸರಂತವರು|
ಉದಯಿಸಲಿ ಮತ್ತೊಮ್ಮೆ
ರನ್ನ ಪಂಪ ಜನ್ನ ಪೊನ್ನ
ಹುಟ್ಟಿಬರಲಿ ಮತ್ತೆ
ಸರ್ವಜ್ಞ ಬಸವ ಅಲ್ಲಮ ಶರೀಫ
ಅಕ್ಕಮಾಹಾದೇವಿಯಂತವರು|
ಉದಯಿಸಲಿ ಮಗದೊಮ್ಮೆ
ಹರಿಹರ ರಾಘವಾಂಕ ನೃಪತುಂಗರಂತ
ಮಹಾ ಕವಿಗಳು||

ಹುಟ್ಟಿ ಬರಲಿ ಮತ್ತೆ
ಪಂಡಿತ್ ಭೀಮಸೇನ ಜೋಯಿಸ
ಗಂಗುಭಾಯಿ ಹಾನಗಲ್|
ಪುನರಪಿಸಲಿ ಮತ್ತೆ
ಪಂಡಿತ್ ಬಸವರಾಜ ರಾಜಗುರು
ಪಂಚಾಕ್ಷರಿ ಗವಾಯಿಯರು|
ಉದಯಿಸಲಿ ಇನ್ನೊಮ್ಮೆ
ಸಂಗೊಳ್ಳಿ ರಾಯಣ್ಣ
ಸಂಚಿ ಹೊನ್ನಮ್ಮನಂತವರು|
ಉದಯಿಸಲಿ ಇನ್ನೊಮ್ಮೆ
ಬೆಳವಡಿ ಮಲ್ಲಮ್ಮ
ಕಿತ್ತೂರ ರಾಣಿ ಚೆನ್ನಮ್ಮಾಜಿಯಂತವರು
ಹುಟ್ಟಿಬರಲಿ ಮತ್ತೊಮ್ಮೆ ಮಗದೊಮ್ಮೆ
ವರನಟ ಮುತ್ತು ರಾಜಕುಮಾರಂತವರು||

ಉದಯಿಸಲಿ ಇನ್ನೊಮ್ಮೆ
ಕನಕ ಪುರಂದರ ದಾಸವರೇಣ್ಯರು
ಹಾಸ್ಯ ರತ್ನ ರಾಮಕೃಷ್ಣ|
ಉದಯಿಸಲಿ ಇನ್ನೊಮ್ಮೆ
ಸಿ.ವಿ. ರಾಮನ್‌ನಂತವರು|
ಭಾರತರತ್ನ ವಿಶ್ವೇಶ್ವರಯ್ಯನಂತವರು
ಮೊಳಗಿಸಲಿ ಎಲ್ಲೆಡೆ ಕನ್ನಡದ ಕಹಳೆಯನು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಗುವಿನ ಹಾಡು
Next post ಹುಣ್ಣಿವೆಯ ಹೊತ್ತಿನ ಹುಟ್ಟು

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

cheap jordans|wholesale air max|wholesale jordans|wholesale jewelry|wholesale jerseys