Home / ಕವನ / ಕವಿತೆ / ಉದಯಿಸಲಿ ಮತ್ತೊಮ್ಮೆ

ಉದಯಿಸಲಿ ಮತ್ತೊಮ್ಮೆ

ಉದಯಿಸಲಿ ಮತ್ತೊಮ್ಮೆ
ಕನ್ನಡದ ಕಣ್ಮಣಿಗಳು|
ಉದಯಿಸಲಿ ಮತ್ತೊಮ್ಮೆ
ಹಿಂದಿನ ಕನ್ನಡದ ಅದ್ವಿತೀಯ
ಅತಿರಥ ಮಾಹಾರಥರು||

ರಾಷ್ಟ್ರಕವಿ ಕುವೆಂಪು
ವರಕವಿ ಬೇಂದ್ರೆಯಂತವರು|
ಕಡಲ ಭಾರ್ಗವ ಕಾರಂತ,
ಪು.ತಿ.ನಾ, ಗೋಕಾಕಂತವರು|
ಮತ್ತೆ ಬೆಳೆಸಲು ಕನ್ನಡದ ಆಸ್ತಿಯನು
ಬರಲೊಮ್ಮೆ ನಮ್ಮಲ್ಲೊಬ್ಬರು ಮಾಸ್ತಿಯಂತವರು|
ಪದ ರತ್ನಗಳ ಬಿಡಿಸಲ್ಲೊಬ್ಬ ರಾಜರತ್ನಂ
ಮಂಕುತಿಮ್ಮನ ಕಗ್ಗದಂತೆ
ಮತ್ತೆ ಬಾರಿಸಲು ಕನ್ನಡ ಡಿಂಡಿಮ||

ಹುಟ್ಟಿಬರಲಿ ಮತ್ತೆ
ಗದುಗಿನ ಕುಮಾರವ್ಯಾಸರಂತವರು|
ಉದಯಿಸಲಿ ಮತ್ತೊಮ್ಮೆ
ರನ್ನ ಪಂಪ ಜನ್ನ ಪೊನ್ನ
ಹುಟ್ಟಿಬರಲಿ ಮತ್ತೆ
ಸರ್ವಜ್ಞ ಬಸವ ಅಲ್ಲಮ ಶರೀಫ
ಅಕ್ಕಮಾಹಾದೇವಿಯಂತವರು|
ಉದಯಿಸಲಿ ಮಗದೊಮ್ಮೆ
ಹರಿಹರ ರಾಘವಾಂಕ ನೃಪತುಂಗರಂತ
ಮಹಾ ಕವಿಗಳು||

ಹುಟ್ಟಿ ಬರಲಿ ಮತ್ತೆ
ಪಂಡಿತ್ ಭೀಮಸೇನ ಜೋಯಿಸ
ಗಂಗುಭಾಯಿ ಹಾನಗಲ್|
ಪುನರಪಿಸಲಿ ಮತ್ತೆ
ಪಂಡಿತ್ ಬಸವರಾಜ ರಾಜಗುರು
ಪಂಚಾಕ್ಷರಿ ಗವಾಯಿಯರು|
ಉದಯಿಸಲಿ ಇನ್ನೊಮ್ಮೆ
ಸಂಗೊಳ್ಳಿ ರಾಯಣ್ಣ
ಸಂಚಿ ಹೊನ್ನಮ್ಮನಂತವರು|
ಉದಯಿಸಲಿ ಇನ್ನೊಮ್ಮೆ
ಬೆಳವಡಿ ಮಲ್ಲಮ್ಮ
ಕಿತ್ತೂರ ರಾಣಿ ಚೆನ್ನಮ್ಮಾಜಿಯಂತವರು
ಹುಟ್ಟಿಬರಲಿ ಮತ್ತೊಮ್ಮೆ ಮಗದೊಮ್ಮೆ
ವರನಟ ಮುತ್ತು ರಾಜಕುಮಾರಂತವರು||

ಉದಯಿಸಲಿ ಇನ್ನೊಮ್ಮೆ
ಕನಕ ಪುರಂದರ ದಾಸವರೇಣ್ಯರು
ಹಾಸ್ಯ ರತ್ನ ರಾಮಕೃಷ್ಣ|
ಉದಯಿಸಲಿ ಇನ್ನೊಮ್ಮೆ
ಸಿ.ವಿ. ರಾಮನ್‌ನಂತವರು|
ಭಾರತರತ್ನ ವಿಶ್ವೇಶ್ವರಯ್ಯನಂತವರು
ಮೊಳಗಿಸಲಿ ಎಲ್ಲೆಡೆ ಕನ್ನಡದ ಕಹಳೆಯನು||
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...