Home / ಕವನ / ಕವಿತೆ / ಉದಯಿಸಲಿ ಮತ್ತೊಮ್ಮೆ

ಉದಯಿಸಲಿ ಮತ್ತೊಮ್ಮೆ

ಉದಯಿಸಲಿ ಮತ್ತೊಮ್ಮೆ
ಕನ್ನಡದ ಕಣ್ಮಣಿಗಳು|
ಉದಯಿಸಲಿ ಮತ್ತೊಮ್ಮೆ
ಹಿಂದಿನ ಕನ್ನಡದ ಅದ್ವಿತೀಯ
ಅತಿರಥ ಮಾಹಾರಥರು||

ರಾಷ್ಟ್ರಕವಿ ಕುವೆಂಪು
ವರಕವಿ ಬೇಂದ್ರೆಯಂತವರು|
ಕಡಲ ಭಾರ್ಗವ ಕಾರಂತ,
ಪು.ತಿ.ನಾ, ಗೋಕಾಕಂತವರು|
ಮತ್ತೆ ಬೆಳೆಸಲು ಕನ್ನಡದ ಆಸ್ತಿಯನು
ಬರಲೊಮ್ಮೆ ನಮ್ಮಲ್ಲೊಬ್ಬರು ಮಾಸ್ತಿಯಂತವರು|
ಪದ ರತ್ನಗಳ ಬಿಡಿಸಲ್ಲೊಬ್ಬ ರಾಜರತ್ನಂ
ಮಂಕುತಿಮ್ಮನ ಕಗ್ಗದಂತೆ
ಮತ್ತೆ ಬಾರಿಸಲು ಕನ್ನಡ ಡಿಂಡಿಮ||

ಹುಟ್ಟಿಬರಲಿ ಮತ್ತೆ
ಗದುಗಿನ ಕುಮಾರವ್ಯಾಸರಂತವರು|
ಉದಯಿಸಲಿ ಮತ್ತೊಮ್ಮೆ
ರನ್ನ ಪಂಪ ಜನ್ನ ಪೊನ್ನ
ಹುಟ್ಟಿಬರಲಿ ಮತ್ತೆ
ಸರ್ವಜ್ಞ ಬಸವ ಅಲ್ಲಮ ಶರೀಫ
ಅಕ್ಕಮಾಹಾದೇವಿಯಂತವರು|
ಉದಯಿಸಲಿ ಮಗದೊಮ್ಮೆ
ಹರಿಹರ ರಾಘವಾಂಕ ನೃಪತುಂಗರಂತ
ಮಹಾ ಕವಿಗಳು||

ಹುಟ್ಟಿ ಬರಲಿ ಮತ್ತೆ
ಪಂಡಿತ್ ಭೀಮಸೇನ ಜೋಯಿಸ
ಗಂಗುಭಾಯಿ ಹಾನಗಲ್|
ಪುನರಪಿಸಲಿ ಮತ್ತೆ
ಪಂಡಿತ್ ಬಸವರಾಜ ರಾಜಗುರು
ಪಂಚಾಕ್ಷರಿ ಗವಾಯಿಯರು|
ಉದಯಿಸಲಿ ಇನ್ನೊಮ್ಮೆ
ಸಂಗೊಳ್ಳಿ ರಾಯಣ್ಣ
ಸಂಚಿ ಹೊನ್ನಮ್ಮನಂತವರು|
ಉದಯಿಸಲಿ ಇನ್ನೊಮ್ಮೆ
ಬೆಳವಡಿ ಮಲ್ಲಮ್ಮ
ಕಿತ್ತೂರ ರಾಣಿ ಚೆನ್ನಮ್ಮಾಜಿಯಂತವರು
ಹುಟ್ಟಿಬರಲಿ ಮತ್ತೊಮ್ಮೆ ಮಗದೊಮ್ಮೆ
ವರನಟ ಮುತ್ತು ರಾಜಕುಮಾರಂತವರು||

ಉದಯಿಸಲಿ ಇನ್ನೊಮ್ಮೆ
ಕನಕ ಪುರಂದರ ದಾಸವರೇಣ್ಯರು
ಹಾಸ್ಯ ರತ್ನ ರಾಮಕೃಷ್ಣ|
ಉದಯಿಸಲಿ ಇನ್ನೊಮ್ಮೆ
ಸಿ.ವಿ. ರಾಮನ್‌ನಂತವರು|
ಭಾರತರತ್ನ ವಿಶ್ವೇಶ್ವರಯ್ಯನಂತವರು
ಮೊಳಗಿಸಲಿ ಎಲ್ಲೆಡೆ ಕನ್ನಡದ ಕಹಳೆಯನು||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...