ಏಕೆ ಹುಟ್ಟಿಸಿದೆ ನನ್ನನು?

ಏಕೆ ಹುಟ್ಟಿಸಿದೆ ನನ್ನನು?
ಎಂದು ಪ್ರಶ್ನೆಯ ಕೇಳದೆ
ಇಲ್ಲಿ ಹುಟ್ಟಿಸಿ
ನಿನ್ನಯ ಕರ್‍ಮವ ಕಳೆಯೆ
ಅವಕಾಶಕಲ್ಪಿಸಿದಕೆ ಕೃತಜ್ಞನಾಗಿರು||

ಏಕೆ ನನಗೆ ಈ ಸ್ಥಿತಿಯ
ನೀಡಿದೆ ಎನ್ನುವುದಕಿಂತ
ಇದಕಿಂತ ಕೆಳಗಿನ ಪರಿಸ್ಥಿತಿಯ
ಅವಲೋಕಿಸಿ, ಇದೇ ನನಗೆ
ಉತ್ತಮವೆಂದು ಸಂತೋಷಪಡು||

ಕಣ್ಣ ಮುಂದಿರುವುದನು ಸ್ವೀಕರಿಸು
ಹಿಂದಿನದನು, ನಾಳೆ ಕಾಣದಿಹನು ನೆನೆದು
ತಟ್ಟೆಯಲ್ಲಿರುವುದನು ತಿರಸ್ಕರಿಸದಿರು|
ಇಂದು ದುಡಿದು ಪುಣ್ಯಸೇರಿಸಿ ನಾಳೆಯ
ಏಳಿಗೆಯ ಭಾಗ್ಯವ ಗಳಿಸು||

ಅನ್ಯರ ಪುಣ್ಯವ ನೋಡಿ ಕೊರಗದಿರು
ಅವರ ಹಿಂದಿನ ಪುಣ್ಯ, ಶ್ರಮ,
ಧರ್ಮನಿಷ್ಠೆಯ ಅನುಸರಿಸಿ
ತಿಳಿದು ಅವರಂತೆ ನೀನಾಗಲು
ಪ್ರಾಮಾಣಿಕ ಸತ್ಯ ಪ್ರಯತ್ನವ ಮಾಡು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಂಟಿ ರಾಣಿಯ ಮನಸು
Next post ಚಂದ್ರಗ್ರಹಣ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

cheap jordans|wholesale air max|wholesale jordans|wholesale jewelry|wholesale jerseys