ಜೀವನವೆಂದರೆ ಬರೀ

ಜೀವನವೆಂದರೆ ಬರೀ
ದುಡ್ಡಿನ ದುಡಿಮೆಯದಲ್ಲಾ|
ಜೀವನವೆಂದರೆ ಬರೀ
ಸದಾ ಸಮಯದ ಹಿಂದೆ ಓಡುವುದಲ್ಲಾ||

ಜೀವನವೆಂದರೆ ಬರೀ
ಇತರರಿಗೆ ನ್ಯಾಯ ಹೇಳುವದಲ್ಲ
ಜೀವನವೆಂದರೆ ಬರೀ
ಓದು ಬರೆಯುವುದಲ್ಲಾ|
ಜೀವನವೆಂದರೆ ಬರೀ
ನೀತಿಯ ಪಾಠವ ಬೋದಿಸುವುದಲ್ಲ
ಜೀವನವೆಂದರೆ ಬರೀ
ನಿಯಮಾವಳಿಯ ಮಾಡುವುದಲ್ಲ||

ಜೀವನವೆಂದರೆ ಬರೀ
ಪುಸ್ತಕ ಬದನೆಯ ತಿಳಿಯುವದಲ್ಲ
ಜೀವನವೆಂದರೆ ಬರೀ
ಹಾಡನು ಹಾಡುವುದಲ್ಲಾ|
ಜೀವನವೆಂದರೆ ಬರೀ
ಇತರರಿಗೆ ಬೆರಳುಮಾಡಿ ತೋರುವುದಲ್ಲ
ಜೀವನವೆಂದರೆ ಬರೀ
ಒಬ್ಬನೇ ಬದುಕಿ ಸಾದಿಸಿ ಹಿಗ್ಗುವುದಲ್ಲ||

ಜೀವನವೆಂದರೆ ಸುಖ ಅಸುಖಗಳನುಭವಿಸಿ
ಜೀವನ ಮೌಲ್ಯಗಳ ಸಾದಿಸಿ ಸಂಪಾದಿಸಿ
ಆದರ್‍ಶಮಾರ್‍ಗದಿ ನಡೆದು ತೋರಿಸುವುದು|
ಧರ್ಮ ಎತ್ತಿಹಿಡಿದು ಬೆಳಗಿಸಿ
ಸತ್ಯಪಾರದರ್ಶಕತೆಯಲಿ ನಡೆದು
ನೀತಿ ಪ್ರೀತಿ ಸೌಹಾರ್‍ದತೆಯಲಿ
ಒಂದಾಗಿ ಬಾಳಿ ಬದುಕುವುದೆಂದರ್‍ಥ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಂದಮನೆ
Next post ಚೆಲುವು-ಒಲವು

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…