ಜೀವನವೆಂದರೆ ಬರೀ

ಜೀವನವೆಂದರೆ ಬರೀ
ದುಡ್ಡಿನ ದುಡಿಮೆಯದಲ್ಲಾ|
ಜೀವನವೆಂದರೆ ಬರೀ
ಸದಾ ಸಮಯದ ಹಿಂದೆ ಓಡುವುದಲ್ಲಾ||

ಜೀವನವೆಂದರೆ ಬರೀ
ಇತರರಿಗೆ ನ್ಯಾಯ ಹೇಳುವದಲ್ಲ
ಜೀವನವೆಂದರೆ ಬರೀ
ಓದು ಬರೆಯುವುದಲ್ಲಾ|
ಜೀವನವೆಂದರೆ ಬರೀ
ನೀತಿಯ ಪಾಠವ ಬೋದಿಸುವುದಲ್ಲ
ಜೀವನವೆಂದರೆ ಬರೀ
ನಿಯಮಾವಳಿಯ ಮಾಡುವುದಲ್ಲ||

ಜೀವನವೆಂದರೆ ಬರೀ
ಪುಸ್ತಕ ಬದನೆಯ ತಿಳಿಯುವದಲ್ಲ
ಜೀವನವೆಂದರೆ ಬರೀ
ಹಾಡನು ಹಾಡುವುದಲ್ಲಾ|
ಜೀವನವೆಂದರೆ ಬರೀ
ಇತರರಿಗೆ ಬೆರಳುಮಾಡಿ ತೋರುವುದಲ್ಲ
ಜೀವನವೆಂದರೆ ಬರೀ
ಒಬ್ಬನೇ ಬದುಕಿ ಸಾದಿಸಿ ಹಿಗ್ಗುವುದಲ್ಲ||

ಜೀವನವೆಂದರೆ ಸುಖ ಅಸುಖಗಳನುಭವಿಸಿ
ಜೀವನ ಮೌಲ್ಯಗಳ ಸಾದಿಸಿ ಸಂಪಾದಿಸಿ
ಆದರ್‍ಶಮಾರ್‍ಗದಿ ನಡೆದು ತೋರಿಸುವುದು|
ಧರ್ಮ ಎತ್ತಿಹಿಡಿದು ಬೆಳಗಿಸಿ
ಸತ್ಯಪಾರದರ್ಶಕತೆಯಲಿ ನಡೆದು
ನೀತಿ ಪ್ರೀತಿ ಸೌಹಾರ್‍ದತೆಯಲಿ
ಒಂದಾಗಿ ಬಾಳಿ ಬದುಕುವುದೆಂದರ್‍ಥ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಂದಮನೆ
Next post ಚೆಲುವು-ಒಲವು

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

cheap jordans|wholesale air max|wholesale jordans|wholesale jewelry|wholesale jerseys