ಗುರುವೇ ನಿನ್ನ ಪಾದ ಧೂಳಿನ

ಗುರುವೇ ನಿನ್ನ ಪಾದ ಧೂಳಿನ
ಕಣದ ಕಣ ನಾನು|
ಕರುಣೆ ತೋರುತಿರು ನೀನು
ಪರಿಪೂರ್ಣನಾಗುವವರೆಗೂ ನಾನು||

ದೀನ ನಾನು ನಿನ್ನ ಅಧೀನನು
ವಿದ್ಯೆ ವಿದ್ವತ್‌ಲಿ ಮೇಧಾವಿ ನೀನು |
ನಿನ್ನನೇ ನಂಬಿಹೆನು ನಾನು
ಮಹಾ ಸಾಗರನು ನೀನು
ಆ ಸಾಗರದಲೊಂದು ಹನಿಯಾಗಿಸಿ
ಎನ್ನ ಬೆರೆಸಿಕೋ ನೀನು||

ನಿನ್ನ ಶಿಷ್ಯರಂತೆಯೇ ಎನ್ನ
ಪರೀಕ್ಷಿಸಿ ಸ್ವೀಕರಿಸು ಪ್ರಭುವೆ|
ನಿನ್ನ ಫ್ರಭಾವವನು ಬೀರಿ
ನಿನ್ನ ಭಕ್ತವೃಂದವನು ಸೇರಿ
ಧನ್ಯನೆಂದೆನಿಸುವೆ ಗುರುವೆ|
ಜೀವನದಲಿ ಇದಕಿಂತ ಬೇರೆ
ಭಾಗ್ಯವೇನಿದೆ ಗುರುವೆ?||

ಗುರು ಬ್ರಹ್ಮ ಗುರು ವಿಷ್ಣು
ಗುರು ದೇವೋ ಮಹೇಶ್ವರಹಃ
ಗುರು ಸಾಕ್ಷಾತ್ ಪರಬ್ರಹ್ಮ
ತಸ್ಮಹಿ ಶ್ರೀ ಗುರವೇ ನಮಃ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಮರಸ್ಯದ ಸಹಿ
Next post ಬಾಯ ಬಂಧಿಸಿದ ಬಸವ

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…