ಗುರುವೇ ನಿನ್ನ ಪಾದ ಧೂಳಿನ

ಗುರುವೇ ನಿನ್ನ ಪಾದ ಧೂಳಿನ
ಕಣದ ಕಣ ನಾನು|
ಕರುಣೆ ತೋರುತಿರು ನೀನು
ಪರಿಪೂರ್ಣನಾಗುವವರೆಗೂ ನಾನು||

ದೀನ ನಾನು ನಿನ್ನ ಅಧೀನನು
ವಿದ್ಯೆ ವಿದ್ವತ್‌ಲಿ ಮೇಧಾವಿ ನೀನು |
ನಿನ್ನನೇ ನಂಬಿಹೆನು ನಾನು
ಮಹಾ ಸಾಗರನು ನೀನು
ಆ ಸಾಗರದಲೊಂದು ಹನಿಯಾಗಿಸಿ
ಎನ್ನ ಬೆರೆಸಿಕೋ ನೀನು||

ನಿನ್ನ ಶಿಷ್ಯರಂತೆಯೇ ಎನ್ನ
ಪರೀಕ್ಷಿಸಿ ಸ್ವೀಕರಿಸು ಪ್ರಭುವೆ|
ನಿನ್ನ ಫ್ರಭಾವವನು ಬೀರಿ
ನಿನ್ನ ಭಕ್ತವೃಂದವನು ಸೇರಿ
ಧನ್ಯನೆಂದೆನಿಸುವೆ ಗುರುವೆ|
ಜೀವನದಲಿ ಇದಕಿಂತ ಬೇರೆ
ಭಾಗ್ಯವೇನಿದೆ ಗುರುವೆ?||

ಗುರು ಬ್ರಹ್ಮ ಗುರು ವಿಷ್ಣು
ಗುರು ದೇವೋ ಮಹೇಶ್ವರಹಃ
ಗುರು ಸಾಕ್ಷಾತ್ ಪರಬ್ರಹ್ಮ
ತಸ್ಮಹಿ ಶ್ರೀ ಗುರವೇ ನಮಃ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಮರಸ್ಯದ ಸಹಿ
Next post ಬಾಯ ಬಂಧಿಸಿದ ಬಸವ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…