ಬಾ ಎನ್ನೆದೆಯ ಗುಡಿಯಲಿ ಬೆಳಗು

ಬಾ ಎನ್ನೆದೆಯ ಗುಡಿಯಲಿ ಬೆಳಗು
ಗುರುವೆ ನೀ ಜ್ಯೋತಿಯಾಗಿ |
ಆರದ ಜ್ಞಾನದ ದಿವ್ಯತೇಜವಾಗಿ||

ಕರುಣಿಸು ಸುಜ್ಞಾನವ
ಹೊಡೆದೋಡಿಸು ಅಜ್ಞಾನವ|
ಆನಂದವ ಕರುಣಿಸು
ಅಂಧಕಾರದ ಕಣ್ಣೀರ ವರೆಸು|
ಹರೆಸು ಮಗುವಂತೆನ್ನ ಕೈಹಿಡಿದು ನಡೆಸು||

ನನ್ನೆಲ್ಲಾ ತಮವ ನೀನಳಿಸು
ನಿನ್ನ ಜ್ಯೋತಿಯಿಂದೆನ್ನ ಹೃದಯದಲಿ
ದೀಪವ ಅಂಟಿಸು|
ಅಗಾಧ ಅನುಭವದ ತೈಲವನು
ಉರ್‍ಜಿತ ಗೊಳಿಸು
ಅನಂತ ಅನವರತ ನೀ‌ಎನ್ನ
ಸಂಪ್ರೀತ ಗೊಳಿಸು||

ವಂದಿಪೆ ಗುರುವೆ ನಿನ್ನಡಿದಾವರೆಗೆ
ಸದಾ ನಡೆಸು, ನುಡಿಸು ಕಾಪಾಡು
ನಾ ಪರಿಪೂರ್ಣನಾಗುವವರೆಗೆ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಡಿನಾಗರ ಸಾಲು
Next post ಬೆಳಕನೆರಚು!

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…