ಬಾ ಎನ್ನೆದೆಯ ಗುಡಿಯಲಿ ಬೆಳಗು

ಬಾ ಎನ್ನೆದೆಯ ಗುಡಿಯಲಿ ಬೆಳಗು
ಗುರುವೆ ನೀ ಜ್ಯೋತಿಯಾಗಿ |
ಆರದ ಜ್ಞಾನದ ದಿವ್ಯತೇಜವಾಗಿ||

ಕರುಣಿಸು ಸುಜ್ಞಾನವ
ಹೊಡೆದೋಡಿಸು ಅಜ್ಞಾನವ|
ಆನಂದವ ಕರುಣಿಸು
ಅಂಧಕಾರದ ಕಣ್ಣೀರ ವರೆಸು|
ಹರೆಸು ಮಗುವಂತೆನ್ನ ಕೈಹಿಡಿದು ನಡೆಸು||

ನನ್ನೆಲ್ಲಾ ತಮವ ನೀನಳಿಸು
ನಿನ್ನ ಜ್ಯೋತಿಯಿಂದೆನ್ನ ಹೃದಯದಲಿ
ದೀಪವ ಅಂಟಿಸು|
ಅಗಾಧ ಅನುಭವದ ತೈಲವನು
ಉರ್‍ಜಿತ ಗೊಳಿಸು
ಅನಂತ ಅನವರತ ನೀ‌ಎನ್ನ
ಸಂಪ್ರೀತ ಗೊಳಿಸು||

ವಂದಿಪೆ ಗುರುವೆ ನಿನ್ನಡಿದಾವರೆಗೆ
ಸದಾ ನಡೆಸು, ನುಡಿಸು ಕಾಪಾಡು
ನಾ ಪರಿಪೂರ್ಣನಾಗುವವರೆಗೆ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಡಿನಾಗರ ಸಾಲು
Next post ಬೆಳಕನೆರಚು!

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…