ಕೆಟ್ಟು ಒಳ್ಳೆಯವನು

ಕೆಟ್ಟು ಒಳ್ಳೆಯವನು ಎಂದೆನಿಸಿಕ್ಕೊಳ್ಳುವುದಕಿಂತ
ಪೆಟ್ಟುತಿಂದು ಜಾಣನಾಗುವುದಕ್ಕಿಂತ |
ಹಾಗೆಯೇ ಎನ್ನ ಒಳ್ಳೆಯವನೆಂದೆನಿಸು
ಛೀ…ಥೂ ಎಂದೆನಿಸದೆ ಎನ್ನ ನೀ ಬೆಳೆಸು||

ಕೆಟ್ಟಮೇಲೆ ಬುದ್ಧಿ ಬರುವುದಕ್ಕಿಂತ
ಕೈಸುಟ್ಟಮೇಲೆ ಅರಿವುಮೂಡುವುದಕ್ಕಿಂತ|
ಕೆಡುವ, ಕೈಸುಡುವ ಮೊದಲೇ ನೀನದನ
ತಿಳಿಸೆನ್ನ ದೊರೆಯೇ ಅರಿಯದ ಎನ್ನ ಹರಸೊ ಹರಿಯೇ||

ಕೋಟೆ ಲೂಟಿಯಾದ ಮೇಲೆ ಬಾಗಿಲ ಹಾಕುವುದಕ್ಕಿಂತ|
ಯೌವನ, ಶಕ್ತಿ‌ಉಡುಗಿದ ಮೇಲೆ
ತತ್ವ ಸಿದ್ಧಾಂತ ಅರಿಯುವುದಕ್ಕಿಂತ ಯೌವನ,
ಶಕ್ತಿ‌ಇರುವಾಗ ನನ್ನಿಂದ ಒಳ್ಳೆಯದ ಮಾಡಿಸು|
ನಿನ್ನ ಭಕ್ತವೃಂದದಲೆನ್ನ ಬೆರೆಸು||

ಕೈಚೆಲ್ಲಿ ಕೂರುವ ಮೊದಲು ನೀ ಕರುಣೆ ತೋರು|
ಕಣ್ಣೀರಲಿ ಕೈತೊಳೆಯುವ ಮುನ್ನವೆ ನೀ ಕಣ್ಣತೆರೆಸು
ಕಾಲ ಗರ್ಭವೆನ್ನ ಹುದುಗಿಸಿಕೊಳ್ಳುವ ಮುನ್ನ
ಕರ್ಮನೀಗಿಸಲಣುವಾಗೆನ್ನ ಬೆಳೆಸಿ ಬಳಸಿ ಕಾಪಾಡು ಕೃಷ್ಣಾ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಗುವಿನ ಪ್ರಶ್ನೆ
Next post ಕರುಳಿನ ಕೊರಗು

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

cheap jordans|wholesale air max|wholesale jordans|wholesale jewelry|wholesale jerseys