ಕೆಟ್ಟು ಒಳ್ಳೆಯವನು

ಕೆಟ್ಟು ಒಳ್ಳೆಯವನು ಎಂದೆನಿಸಿಕ್ಕೊಳ್ಳುವುದಕಿಂತ
ಪೆಟ್ಟುತಿಂದು ಜಾಣನಾಗುವುದಕ್ಕಿಂತ |
ಹಾಗೆಯೇ ಎನ್ನ ಒಳ್ಳೆಯವನೆಂದೆನಿಸು
ಛೀ…ಥೂ ಎಂದೆನಿಸದೆ ಎನ್ನ ನೀ ಬೆಳೆಸು||

ಕೆಟ್ಟಮೇಲೆ ಬುದ್ಧಿ ಬರುವುದಕ್ಕಿಂತ
ಕೈಸುಟ್ಟಮೇಲೆ ಅರಿವುಮೂಡುವುದಕ್ಕಿಂತ|
ಕೆಡುವ, ಕೈಸುಡುವ ಮೊದಲೇ ನೀನದನ
ತಿಳಿಸೆನ್ನ ದೊರೆಯೇ ಅರಿಯದ ಎನ್ನ ಹರಸೊ ಹರಿಯೇ||

ಕೋಟೆ ಲೂಟಿಯಾದ ಮೇಲೆ ಬಾಗಿಲ ಹಾಕುವುದಕ್ಕಿಂತ|
ಯೌವನ, ಶಕ್ತಿ‌ಉಡುಗಿದ ಮೇಲೆ
ತತ್ವ ಸಿದ್ಧಾಂತ ಅರಿಯುವುದಕ್ಕಿಂತ ಯೌವನ,
ಶಕ್ತಿ‌ಇರುವಾಗ ನನ್ನಿಂದ ಒಳ್ಳೆಯದ ಮಾಡಿಸು|
ನಿನ್ನ ಭಕ್ತವೃಂದದಲೆನ್ನ ಬೆರೆಸು||

ಕೈಚೆಲ್ಲಿ ಕೂರುವ ಮೊದಲು ನೀ ಕರುಣೆ ತೋರು|
ಕಣ್ಣೀರಲಿ ಕೈತೊಳೆಯುವ ಮುನ್ನವೆ ನೀ ಕಣ್ಣತೆರೆಸು
ಕಾಲ ಗರ್ಭವೆನ್ನ ಹುದುಗಿಸಿಕೊಳ್ಳುವ ಮುನ್ನ
ಕರ್ಮನೀಗಿಸಲಣುವಾಗೆನ್ನ ಬೆಳೆಸಿ ಬಳಸಿ ಕಾಪಾಡು ಕೃಷ್ಣಾ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಗುವಿನ ಪ್ರಶ್ನೆ
Next post ಕರುಳಿನ ಕೊರಗು

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…