ಆಸೆಯು ಮುಂದೆ

ಆಸೆಯು ಮುಂದೆ ನಿರಾಸೆಯು ಹಿಂದೆ|
ಆಮಿಷದಿಂದೆ ಬೇಸರ ಮುಂದೆ|
ತಿಳಿದೂ ಅದರ ಹಿಂದೆ ಹೋದರೆ
ನಾವೂ ಕುರಿ ಮಂದೆ||

ಬೆಳಕ ಜೊತೆಯಲಿ ನೆರಳಿರುವಂತೆ
ದೀಪದ ಕೆಳಗಡೆ ಕತ್ತಲಿರುವಂತೆ
ಆಸೆಯು ತುಂಬಾ ಚಿಕ್ಕದಿರಬೇಕು|
ನಾಳೆಯ ಕಾಣಲಷ್ಟೇ ಆಸೆಯು ಬೇಕು
ದುರಾಸೆಯ ಬುದ್ಧಿಯ ಕೈ ಬಿಡಬೇಕು|
ಅಸೂಯ್ಯೆ ಅಸಹನೆ ಅಸಹಕಾರ
ಮನುಜನ ಅವಸಾನಕೆ ಕಾರಣ||

ಆಸೆಯೇ ದುಃಖದ ಮೂಲವೆಂದರು
ಜೀವನವನರಿತ ಶಿವ ಶರಣವರೇಣ್ಯರು|
ಆಮಿಷ ಮನುಜನ ಮೋಸದ ಜಾಲ|
ಬಲಿಯಾಗುವ ಮುನ್ನವೇ
ತಿಳಿಯಿರಿ ನೀವದರ ಮೂಲ|
ಅತೀ ಆಸೆಯ ಪಡದೆ ನಿರಾಸೆಹೊಂದದೆ
ಇತಿಮಿತಿಯಲಿ ಜೀವಿಸುವುದೇ ಸುಖದ ಮೂಲ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕತ್ತಲು
Next post ಹೊಸಕಾಲದ ಕವಿ!

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

cheap jordans|wholesale air max|wholesale jordans|wholesale jewelry|wholesale jerseys