ಆಸೆಯು ಮುಂದೆ

ಆಸೆಯು ಮುಂದೆ ನಿರಾಸೆಯು ಹಿಂದೆ|
ಆಮಿಷದಿಂದೆ ಬೇಸರ ಮುಂದೆ|
ತಿಳಿದೂ ಅದರ ಹಿಂದೆ ಹೋದರೆ
ನಾವೂ ಕುರಿ ಮಂದೆ||

ಬೆಳಕ ಜೊತೆಯಲಿ ನೆರಳಿರುವಂತೆ
ದೀಪದ ಕೆಳಗಡೆ ಕತ್ತಲಿರುವಂತೆ
ಆಸೆಯು ತುಂಬಾ ಚಿಕ್ಕದಿರಬೇಕು|
ನಾಳೆಯ ಕಾಣಲಷ್ಟೇ ಆಸೆಯು ಬೇಕು
ದುರಾಸೆಯ ಬುದ್ಧಿಯ ಕೈ ಬಿಡಬೇಕು|
ಅಸೂಯ್ಯೆ ಅಸಹನೆ ಅಸಹಕಾರ
ಮನುಜನ ಅವಸಾನಕೆ ಕಾರಣ||

ಆಸೆಯೇ ದುಃಖದ ಮೂಲವೆಂದರು
ಜೀವನವನರಿತ ಶಿವ ಶರಣವರೇಣ್ಯರು|
ಆಮಿಷ ಮನುಜನ ಮೋಸದ ಜಾಲ|
ಬಲಿಯಾಗುವ ಮುನ್ನವೇ
ತಿಳಿಯಿರಿ ನೀವದರ ಮೂಲ|
ಅತೀ ಆಸೆಯ ಪಡದೆ ನಿರಾಸೆಹೊಂದದೆ
ಇತಿಮಿತಿಯಲಿ ಜೀವಿಸುವುದೇ ಸುಖದ ಮೂಲ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕತ್ತಲು
Next post ಹೊಸಕಾಲದ ಕವಿ!

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…