ಅಪ್ಪ ಸತ್ತಾಗ!

ಅಪ್ಪ ಸತ್ತಾಗ! ನಾ ಇನ್ನು ಚಿಕ್ಕವನು|
ಗೋಲಿ ಆಡುವ ವಯಸ್ಸು
ಸದಾ ಟಿ.ವಿ ನೋಡುವ ಮನಸು||

ಏನೋ ಪೋನ್ ಬಂತು
ಎಲ್ಲ ಗುಸುಗುಸು ಮಾತು
ಅಮ್ಮನಿಗೆ ಭಯ ದನಿಯ ಕಂಪನ|
ಅಂದು ತಡವಾಗಿ ಚಿಕ್ಕಪ್ಪ ಹೇಳಿದರು
ನಿನ್ನ ಅಪ್ಪ ಇನ್ನಿಲ್ಲವೆಂದು|
ನನಗೆ ಏನೂ ಅನ್ನಿಸಲಿಲ್ಲ ಅಂದು
ಎಲ್ಲರೂ ಗೊಳೋ ಎಂದು ಅಳುತ್ತಿದ್ದರು||
ನನಗೆ ಅಳುಬರುತ್ತಿರಲಿಲ್ಲ

ಅಳುವವರ ನೋಡಿದರೂ
ಅರ್ಥವಾಗುತ್ತಿರಲಿಲ್ಲ|
ಬಂದ ಸಂಬಂಧಿಕರೆಲ್ಲಾ
ನನ್ನ ನೋಡಿದೊಡನೆ ಅವರ
ಕಣ್ಣುಗಳು ತುಂಬಿಕೊಳ್ಳುತ್ತಿದ್ದವು||

ಅಪ್ಪ ನಿನ್ನೆ ಹೊರಡುವಾಗ ಎಂದಿನಂತೆ
ಟಾಟ ಮಾಡಿದ್ದು ನನ್ನ ಕಣ್ಣಲ್ಲಿಯೇ ಇತ್ತು
ಆ ಟಾಟದಲ್ಲಿ ಏನೋ ವಿಶೇಷವೆನಿಸಿತ್ತು|
ಆಗ ಅನ್ನಿಸಿರಲಿಲ್ಲ ಅದುವೆ ನನ್ನಾ
ನನ್ನ ತಂದೆಯ ಕೊನೆಯ ಮಿಲನಕ್ಷಣವೆಂದು|
ರಸ್ತೆ ಅಪಘಾತ ಇಂಥಾ ಆಪತ್ತತರುತ್ತದೆಂದು
ನಾವು ಯಾರೂ ಊಹಿಸಿರಲಿಲ್ಲವೆಂದು||

ಅಪ್ಪ ಹೊರಗೆ ಹೂವಿನ ಹಾಸಿಗೆಯಲಿ
ಮಲಗಿದಂತೆ ನನಗೆ ಕಾಣಿಸುತ್ತಿತ್ತು|
ಮುಖಮಾತ್ರ ಕಾಣುತಿತ್ತು
ಬೇರೆಲ್ಲಾ ಬ್ಯಾಂಡೇಜು ಸುತ್ತಿತ್ತು|
ಮನೆತುಂಬ ಜನ, ಸಾಂಬ್ರಾಣಿ ಹೊಗೆ
ಕಣ್ಣು ಉರಿಯುತಿತ್ತು
ನೀಲಗಿರಿ‌ಎಣ್ಣೆ ವಾಸನೆ ಜಾಸ್ತಿಯೆನಿಸುತ್ತಿತ್ತು||

ಸೂರ್‍ಯ ಇಳಿಯುತ್ತಿದ್ದ ಸಮಯ
ಯಾರೋ ಮರದ ಸಾಮಾನುಗಳ ತಂದರು|
ಏನೋ ಚೌಕಾಕಾರದಂತೆ ಕಟ್ಟಿದರು
ಅದರಮೇಲೆ ಅಪ್ಪನ ಮಲಗಿಸಿದರು|
ಎಲ್ಲರೂ ಹೂ ಪತ್ರೆಗಳ ಹಾಕಿ ಹೊತ್ತೊಯ್ದರು
ಚಿಕ್ಕಪ್ಪನೇ ಎಲ್ಲಾ ಕಾರ್‍ಯವ ಮಾಡಿ
ಮುಗಿಸಿದರು||

ಆಜ್ಜಿ ಅಜ್ಜ ನಮ್ಮನು ಕರೆದುಕೊಂಡೋದರು
ಎಷ್ಟೋ ದಿನ ನೆಲ ಹಿಡಿದ
ಆಮ್ಮ ಮೇಲೆದ್ದರು|
ಸಣ್ಣದೊಂದು ಕೆಲಸಹಿಡಿದರು
ಬದುಕು ಕುಂಟುತಾ ಸಾಗಿ
ನನ್ನ ಶಾಲೆ ಹೇಗೋ ಮುಗಿಯಿತು|
ಆಮ್ಮ ಮತ್ತು ನನ್ನನು
ಮಾವಂದಿರು, ಚಿಕ್ಕಪ್ಪಂದಿರು ಎಲ್ಲಾ
ಚೆನ್ನಾಗಿ ನೋಡಿಕೊಂಡರಿಲ್ಲಿಯವರೆಗೆ||

ಆದರೆ ಏನೋ ಕೊರತೆ
ಏನೋ ಮಹತ್ವದ ಎಂದೋ
ಕಳೆದುಕೊಡ ಭಾವ ಕಾಡುತ್ತಿದೆ|
ಈಗ ಒಬ್ಬನೇ ಅಳುತ್ತಿರುವೆ
ಒಮ್ಮೊಮ್ಮೆ ಅಪ್ಪ ಎಲ್ಲಿ ಎಂದು
ಯಾರು ಸಂತೈಸುವರಿಲ್ಲ ಬಂದು|
ಅಮ್ಮನಿಗೆ ನಾನು, ನನಗೆ ಅಮ್ಮನೇ ಬಂಧು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರತ್ನನ್ ಪರ್‍ಪಂಚ
Next post ಸ್ವಾತಂತ್ರ್ಯ

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…