Home / ಕವನ / ಕವಿತೆ / ಅಪ್ಪ ಸತ್ತಾಗ!

ಅಪ್ಪ ಸತ್ತಾಗ!

ಅಪ್ಪ ಸತ್ತಾಗ! ನಾ ಇನ್ನು ಚಿಕ್ಕವನು|
ಗೋಲಿ ಆಡುವ ವಯಸ್ಸು
ಸದಾ ಟಿ.ವಿ ನೋಡುವ ಮನಸು||

ಏನೋ ಪೋನ್ ಬಂತು
ಎಲ್ಲ ಗುಸುಗುಸು ಮಾತು
ಅಮ್ಮನಿಗೆ ಭಯ ದನಿಯ ಕಂಪನ|
ಅಂದು ತಡವಾಗಿ ಚಿಕ್ಕಪ್ಪ ಹೇಳಿದರು
ನಿನ್ನ ಅಪ್ಪ ಇನ್ನಿಲ್ಲವೆಂದು|
ನನಗೆ ಏನೂ ಅನ್ನಿಸಲಿಲ್ಲ ಅಂದು
ಎಲ್ಲರೂ ಗೊಳೋ ಎಂದು ಅಳುತ್ತಿದ್ದರು||
ನನಗೆ ಅಳುಬರುತ್ತಿರಲಿಲ್ಲ

ಅಳುವವರ ನೋಡಿದರೂ
ಅರ್ಥವಾಗುತ್ತಿರಲಿಲ್ಲ|
ಬಂದ ಸಂಬಂಧಿಕರೆಲ್ಲಾ
ನನ್ನ ನೋಡಿದೊಡನೆ ಅವರ
ಕಣ್ಣುಗಳು ತುಂಬಿಕೊಳ್ಳುತ್ತಿದ್ದವು||

ಅಪ್ಪ ನಿನ್ನೆ ಹೊರಡುವಾಗ ಎಂದಿನಂತೆ
ಟಾಟ ಮಾಡಿದ್ದು ನನ್ನ ಕಣ್ಣಲ್ಲಿಯೇ ಇತ್ತು
ಆ ಟಾಟದಲ್ಲಿ ಏನೋ ವಿಶೇಷವೆನಿಸಿತ್ತು|
ಆಗ ಅನ್ನಿಸಿರಲಿಲ್ಲ ಅದುವೆ ನನ್ನಾ
ನನ್ನ ತಂದೆಯ ಕೊನೆಯ ಮಿಲನಕ್ಷಣವೆಂದು|
ರಸ್ತೆ ಅಪಘಾತ ಇಂಥಾ ಆಪತ್ತತರುತ್ತದೆಂದು
ನಾವು ಯಾರೂ ಊಹಿಸಿರಲಿಲ್ಲವೆಂದು||

ಅಪ್ಪ ಹೊರಗೆ ಹೂವಿನ ಹಾಸಿಗೆಯಲಿ
ಮಲಗಿದಂತೆ ನನಗೆ ಕಾಣಿಸುತ್ತಿತ್ತು|
ಮುಖಮಾತ್ರ ಕಾಣುತಿತ್ತು
ಬೇರೆಲ್ಲಾ ಬ್ಯಾಂಡೇಜು ಸುತ್ತಿತ್ತು|
ಮನೆತುಂಬ ಜನ, ಸಾಂಬ್ರಾಣಿ ಹೊಗೆ
ಕಣ್ಣು ಉರಿಯುತಿತ್ತು
ನೀಲಗಿರಿ‌ಎಣ್ಣೆ ವಾಸನೆ ಜಾಸ್ತಿಯೆನಿಸುತ್ತಿತ್ತು||

ಸೂರ್‍ಯ ಇಳಿಯುತ್ತಿದ್ದ ಸಮಯ
ಯಾರೋ ಮರದ ಸಾಮಾನುಗಳ ತಂದರು|
ಏನೋ ಚೌಕಾಕಾರದಂತೆ ಕಟ್ಟಿದರು
ಅದರಮೇಲೆ ಅಪ್ಪನ ಮಲಗಿಸಿದರು|
ಎಲ್ಲರೂ ಹೂ ಪತ್ರೆಗಳ ಹಾಕಿ ಹೊತ್ತೊಯ್ದರು
ಚಿಕ್ಕಪ್ಪನೇ ಎಲ್ಲಾ ಕಾರ್‍ಯವ ಮಾಡಿ
ಮುಗಿಸಿದರು||

ಆಜ್ಜಿ ಅಜ್ಜ ನಮ್ಮನು ಕರೆದುಕೊಂಡೋದರು
ಎಷ್ಟೋ ದಿನ ನೆಲ ಹಿಡಿದ
ಆಮ್ಮ ಮೇಲೆದ್ದರು|
ಸಣ್ಣದೊಂದು ಕೆಲಸಹಿಡಿದರು
ಬದುಕು ಕುಂಟುತಾ ಸಾಗಿ
ನನ್ನ ಶಾಲೆ ಹೇಗೋ ಮುಗಿಯಿತು|
ಆಮ್ಮ ಮತ್ತು ನನ್ನನು
ಮಾವಂದಿರು, ಚಿಕ್ಕಪ್ಪಂದಿರು ಎಲ್ಲಾ
ಚೆನ್ನಾಗಿ ನೋಡಿಕೊಂಡರಿಲ್ಲಿಯವರೆಗೆ||

ಆದರೆ ಏನೋ ಕೊರತೆ
ಏನೋ ಮಹತ್ವದ ಎಂದೋ
ಕಳೆದುಕೊಡ ಭಾವ ಕಾಡುತ್ತಿದೆ|
ಈಗ ಒಬ್ಬನೇ ಅಳುತ್ತಿರುವೆ
ಒಮ್ಮೊಮ್ಮೆ ಅಪ್ಪ ಎಲ್ಲಿ ಎಂದು
ಯಾರು ಸಂತೈಸುವರಿಲ್ಲ ಬಂದು|
ಅಮ್ಮನಿಗೆ ನಾನು, ನನಗೆ ಅಮ್ಮನೇ ಬಂಧು||
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...