ನಿನ್ನ ನೀನು ನಡೆಯೇ

ನಿನ್ನ ನೀನು ನಡೆಯೇ
ಮನವೆ ನಿನ್ನ ಬಾಳು ಜೇನು
ನಿನ್ನ ಕರುಣೆ ಕಮಲದಂತೆ
ನಡುವೆ ನೀನು ಅಮರನಂತೆ

ಹಸಿರ ಹುಲ್ಲು ಹಾಸಿಗೆಯಂತೆ
ಮಲ್ಗೆ ಹೂವು ಘಮ ಘಮದಂತೆ
ತಾಯಿ ಒಡಲ ಬಳ್ಳಿ ನೀನು
ಬೆಳೆಯ ನೀನು ಬಾಳಿನ ಬೆಳಕು

ನಿಂತ ನಿಲುವು ಮಂದಹಾಸ
ನಿನ್ನ ಬಾಳ್ವೆ ಸಮರಸ
ತಿಳಿಯೇ ನೀನು ಸಮರವೇನು
ಬಾಳ್ವೆ ಬದುಕು ಹಾಲು ಜೇನು

ಒಂದೇ ತಾಯ ಮಕ್ಕಳೆಂದು
ಸೃಷ್ಟಿ ಸೊಬಗ ಹೂವುಗಳೆಂದು
ನಿನ್ನ ನಿಲುವ ಪಡೆವೆ ಏನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಗವದ್ಭಕ್ತಿ
Next post ಕವಿ-ಕಾವ್ಯ

ಸಣ್ಣ ಕತೆ

  • ಆವಲಹಳ್ಳಿಯಲ್ಲಿ ಸಭೆ

    ಪ್ರಕರಣ ೯ ಹಿಂದೆಯೇ ನಿಶ್ಚೈಸಿದ್ದಂತೆ ಆವಲಹಳ್ಳಿಯಲ್ಲಿ ಉಪಾಧ್ಯಾಯರ ಸಂಘದ ಸಭೆಯನ್ನು ಸೇರಿಸಲು ಏರ್ಪಾಟು ನಡೆದಿತ್ತು. ರಂಗಣ್ಣನು ಹಿಂದಿನ ದಿನ ಸಾಯಂಕಾಲವೇ ಆವಲಹಳ್ಳಿಗೆ ಬಂದು ಮೊಕ್ಕಾಂ ಮಾಡಿದನು. ಸಭೆಯಲ್ಲಿ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…